ಸಕಲೇಶಪುರ : ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡಿಸಲಿಗೆ ನುಗ್ಗಿದ ಪರಿಣಾಮ ಶೆಡ್‌ನಲ್ಲಿ ಮಲಗಿದ್ದ ಐವರು ಕಾರ್ಮಿಕರು  ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಅಪಘಾತದಲ್ಲಿ ಶೆಡ್‌ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ  ಹಾಗೂ ನಿರ್ವಾಹಕ ಸೇರಿ ಒಟ್ಟು  ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 


ಇದನ್ನೂ ಓದಿ- ಮದುವೆ ಹಿಂದಿನ ದಿನ ಕೈ ಕೊಟ್ಟ ವರ: ಹುಡುಗನ ಮನೆ ಮುಂದೆ ಯುವತಿ ಧರಣಿ


ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಘಟನೆ ನಡೆದಿದ್ದು,  ಮಂಗಳೂರಿನಿಂದ ಅರುಣಾಚಲ ಪ್ರದೇಶಕ್ಕೆ  ಸಿಮೆಂಟ್ ತುಂಬಿಕೊಂಡು ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಹದಿನಾರು ಚಕ್ರದ ಲಾರಿ, ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಚಾಲಕನ ನಿಯಂತ್ರಣ ತಪ್ಪಿ ಕೂಲಿ ಕಾರ್ಮಿಕರ ಶೆಡ್‌ಗೆ ಏಕಾಏಕಿ ನುಗ್ಗಿದೆ.‌ ಆ ಸಂದರ್ಭದಲ್ಲಿ ಊಟ ಮುಗಿಸಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ.


ಇದನ್ನೂ ಓದಿ- ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ..!


ಗಾಯಾಳುಗಳನ್ನು ಕೂಡಲೇ ಸಕಲೇಶಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಹಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಡಿದ್ದರಿಂದ ಸ್ಥಳಕ್ಕೆ ಪೊಲೀಸರು ಭೇಟಿ ಟ್ರಾಫಿಕ್ ತೆರವುಗೊಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.