ಬೆಂಗಳೂರು : ಹೈಕೋರ್ಟ್ ನ್ಯಾಯಾಧೀಶರ ಮುಂದೆ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಶ್ರೀನಿವಾಸ್ ಚಿನ್ನಂ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಹೈಕೋರ್ಟ್ ಭದ್ರತೆಗೆ ನಿಯೋಜನೆಗೊಂಡಿದ್ದ ಹೆಡ್‌ಕಾನ್ ಸ್ಟೇಬಲ್ ರಾಜು ಎಂಬುವರು ನೀಡಿದ ದೂರಿನ ಮೇರೆಗೆ ಮೈಸೂರು ಮೂಲದ ಶ್ರೀನಿವಾಸ್ ವಿರುದ್ಧ ಐಪಿಸಿ 309 ಅಡಿ ಎಫ್ಐಆರ್ ದಾಖಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಪಡೆಯುತ್ತಿರುವ ಶ್ರೀನಿವಾಸ ಅವರ ಆರೋಗ್ಯದಲ್ಲಿ ಚೇತರಿಕೆ ಬಳಿಕ ಹೇಳಿಕೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ:ಸಾವಿನ ಮುನ್ಸೂಚನೆ ಸಿಕ್ಕಿತ್ತಾ ಡೇನಿಯಲ್‌ಗೆ..! ಈ ಪುಣ್ಯ ಕ್ಷೇತ್ರಗಳ ದರ್ಶನ ಪಡೆದಿದ್ದ ನಟ


ಘಟನೆ ಹಿನ್ನೆಲೆ : ಮುಖ್ಯ ನ್ಯಾಯಮೂರ್ತಿ ಅನ್. ವಿ. ಅಂಜಾರಿಯಾ ಮತ್ತು ಡಾ. ನ್ಯಾಯಮೂರ್ತಿ ಎಚ್ ಬಿ ಪ್ರಭಾಕರ್ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ನಿನ್ನೆ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು. ಏಕಾಏಕಿ ಪೀಠದ ಮುಂದೆ ಶ್ರೀನಿವಾಸ್ ದಾಖಲೆಗಳನ್ನು ನ್ಯಾಯಾಲಯದ ಅಧಿಕಾರಿಗೆ ಸಲ್ಲಿಸಿ, ನನಗೆ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದರು. 


ತಕ್ಷಣ ತಮ್ಮ ಜೇಬಿನಿಂದ ರೇಜರ್ ತೆಗೆದು ಕುತ್ತಿಗೆ ಕೊಯ್ಯಲು ಮುಂದಾದರು. ಈ ವೇಳೆ ಕೋರ್ಟ್ ಸಭಾಂಗಣಲ್ಲಿದ್ದ ವಕೀಲರು ಅವರನ್ನು ತಡೆದು, ಪೊಲೀಸರಿಗೆ ಒಪ್ಪಿಸಿ ಬಳಿಕ‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಪಡೆಯುತ್ತಿರುವ ಶ್ರೀನಿವಾಸ್,  ಆತ್ಮಹತ್ಯೆಯ ಯತ್ನಕ್ಕೆ ನಿಖರ ಕಾರಣ ತಿಳಿದುಕೊಳ್ಳಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.