Terrible Road Accident: ಲಾರಿ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಕ್ಕಬೆನ್ನೂರು ಬಳಿ ಈ ದುರ್ಘಟನೆ ನಡೆದಿದ್ದು, ಅಪಘಾತ ತೀವ್ರತೆಗೆ ಮೂವರು ಸ್ಥಳದಲ್ಲೇ ಅಸುನಿಗಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28) ಮತ್ತು ಮಗು ಸೋಹನ್ (2) ಮೃತ ದುರ್ದೈವಿಗಳಾಗಿದ್ದಾರೆ. ಗಾಯಗೊಂಡವರನ್ನು ಶಿಲ್ಪ, ಸ್ವರ್ಣ ಜಾರ್ಜ್‌, ಮಧುಮಿತ, ವಿಜಯ್ ರೆಡ್ಡಿ, ಕೃಷ್ಣ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?


ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


ಇದನ್ನೂ ಓದಿವರ್ಜಿನ್‌, 30 ಲಕ್ಷ ಸಂಬಳ ಪಡೆವ ವರ ಎರಡನೇ ಮದುವೆಯಾಗಲು ಬೇಕಂತೆ ಈ ಸುಂದರಿಗೆ.! ರೂಲ್ಸ್‌ ಬೇರೆ ಇದಾವೆ ಗುರು.. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.