ಬೆಂಗಳೂರು: ತಾನು ಸಾಕಿದ್ದ  ನಾಯಿಯ ಬೆಲ್ಟ್ ನಲ್ಲೇ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರ್ಯಾಮಾನ್ ಘೋಷ್(22) ಮೃತ ಯುವಕನಾಗಿದ್ದಾನೆ. 


COMMERCIAL BREAK
SCROLL TO CONTINUE READING

ಮೂಲತಃ ಪಶ್ಚಿಮ ಬಂಗಾಳ ಮೂಲದವನಾದ ಈತ ಕೊನೆಯ ವರ್ಷದ ಇಂಜಿನಿಯರಿಂಗ್ ಓದಿಕೊಂಡು ಖಾಸಗಿ ಕಂಪನಿಯಲ್ಲಿ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡಿದ್ದ. ಸಾರ್ವಭೌಮ ನಗರದ ಬಾಡಿಗೆ ಮನೆಯಲ್ಲಿದ್ದ ಈತ ಒಂದು ನಾಯಿಯನ್ನು ಸಾಕಿಕೊಂಡಿದ್ದ. 


ಇದನ್ನೂ ಓದಿ- Bengaluru: ಪ್ರಿಯತಮನ ಜೊತೆ ಚಕ್ಕಂದವಾಡಲು ಗಂಡನ ಹತ್ಯೆ ಮಾಡಿಸಿದ್ದ ಹೆಂಡತಿ ಸೇರಿ ಐವರ ಬಂಧನ!


ಕೆಲ ದಿನಗಳಿಂದ ವೈಯಕ್ತಿಕ ಕಾರಣಗಳಿಗಾಗಿ ಖಿನ್ನತೆ ಒಳಗಾಗಿದ್ದ ಎನ್ನಲಾಗಿದೆ. ಹೀಗಾಗಿ ನಿನ್ನೆ ರಾತ್ರಿ ತಾನೂ ಸಾಕಿದ್ದ ನಾಯಿಯ ಹಸಿರು ಬಣ್ಣದ ಬೆಲ್ಟ್ ನಲ್ಲಿ ಮನೆಯಲ್ಲಿರುವ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 


ಇದನ್ನೂ ಓದಿ- Road Accident: ಭೀಕರ ರಸ್ತೆ ಅಪಘಾತಕ್ಕೆ 48 ಜನರು ಬಲಿ..!


ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾನೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಮೈಕೊಲೇಔಟ್  ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.