ಬೆಂಗಳೂರು : ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ಕೊನೆಗೂ ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗುಜರಾತ್‌ನಲ್ಲಿ ಅಡಗಿ ಕುಳಿತಿದ್ದ ಕಿರಾತಕ ರವಿಯನ್ನ ಮೈಸೂರಿನ ಎಸಿಪಿ ಎಂ.ಶಿವಶಂಕರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಸ್ಪೆಷಲ್ ತನಿಖಾ ತಂಡ ಎಂದೇ ಖ್ಯಾತಿ ಪಡೆದ ರಾಜು, ದಿವಾಕರ್, ಶೇಖರ್, ಮಲ್ಲೇಶ್ ಒಳಗೊಂಡ ಇನ್ಸ್ಪೆಕ್ಟರ್‌ಗಳು ಕಾರ್ಯಚರಣೆ ಯಶಸ್ವಿಯಾಗಿದೆ. 


ಇದನ್ನೂ ಓದಿ : ಕಾಮಗಾರಿಗಳಿಗೆ ಲಂಚ..‌ ಪಂಚಾಯ್ತಿ ಮುಂದೆ ಭಿಕ್ಷಾಪಾತ್ರೆ ಹಿಡಿದು ಕುಳಿತ ಗ್ರಾಪಂ ಸದಸ್ಯ


ಸ್ಯಾಂಟ್ರೋ ರವಿ ಮೈಸೂರಿಂದ ಮಂಗಳೂರು ಮೂಲಕ ಮುಂಬೈ ಮೂಲಕ ಗುಜರಾತ್‌ಗೆ ಹೋಗಿ ನೆಲೆಸಿದ್ದ. ಇಂದು ಬೆಳಗ್ಗೆ ಕಾರ್ಯಚರಣೆ ನಡೆಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದೀಗಾ ಪೊಲೀಸರು ಸ್ಯಾಂಟ್ರೋ ರವಿಯನ್ನ ಮೈಸೂರಿಗೆ ಕರೆತರುತ್ತಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ಜೀ ನ್ಯೂಸ್ ಕನ್ನಡಕ್ಕೆ ಮಾಹಿತಿ ಲಭ್ಯವಾಗಿದೆ. 


ಸ್ಯಾಂಟ್ರೋ ರವಿ ಬಂಧನ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಇಂದು ಸಂಜೆ 5  ಗಂಟೆಗೆ ತುರ್ತು ಸುದ್ದಿಗೋಷ್ಠಿಯನ್ನ ಕರೆದಿದ್ದಾರೆ. ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಸ್ಯಾಂಟ್ರೋ ರವಿ ಬಂಧನದ ಕಾರ್ಯಚರಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.


ಇದನ್ನೂ ಓದಿ : Online Fraud: ಆನ್ಲೈನ್ ನಲ್ಲಿ ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆ ಕಳೆದುಕೊಂಡಿದ್ದು ಬರೋಬ್ಬರಿ 10 ಲಕ್ಷ ರೂ..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.