Salman Khan: ಪಂಜಾಬ್ ಸಿಂಗರ್ ಸಿಧು ಮುಸೇವಾಲಾ ಹಾಗೆ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್‌ ಕೊಲ್ಲುವುದಾಗಿ ಬೆದರಿಕೆ ಪತ್ರವೊಂದು ಬಂದಿದೆ. 


COMMERCIAL BREAK
SCROLL TO CONTINUE READING

ಮಾಹಿತಿಯ ಪ್ರಕಾರ, ಸಲ್ಮಾನ್ ಖಾನ್ ಅವರ ತಂದೆ ಬೆಳಿಗ್ಗೆ ಜಾಗಿಂಗ್ ಮಾಡಲು ಹೋದಾಗ ಅಲ್ಲಿ ಅವರು ಬೆಂಚ್ ಮೇಲೆ ಕುಳಿತಿದ್ದಾಗ ಅವರಿಗೆ ಮತ್ತು ಅವರ ಮಗ ಸಲ್ಮಾನ್ ಖಾನ್ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


ಇದನ್ನೂ ಓದಿ : Shah Rukh Khan: ಬಾಲಿವುಡ್‌ ನಟ ಶಾರುಖ್ ಖಾನ್‌ಗೆ ಕೋವಿಡ್ ಪಾಸಿಟಿವ್‌


ಬಾಂದ್ರಾದಲ್ಲಿ ದಾಖಲಾಗಿದೆ ಎಫ್‌ಐಆರ್ 


ಮುಂಬೈನ ಬಾಂದ್ರಾದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿಶೇಷವೆಂದರೆ ಸಿಧು ಮುಸೇವಾಲಾ ನಿಧನದ ನಂತರ ಸಲ್ಮಾನ್ ಖಾನ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಏಕೆಂದರೆ ಸಿಧು ಮುಸೇವಾಲಾ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಬಿಷ್ಣೋಯ್ ಕೆಲವು ವರ್ಷಗಳ ಹಿಂದೆಯೇ ಸಲ್ಮಾನ್ ಖಾನ್ ನನ್ನು ಕೊಲ್ಲಲು ಪ್ಲಾನ್  ಮಾಡಿದ್ದ. ಇದನ್ನು ಗಮನದಲ್ಲಿಟ್ಟುಕೊಂಡು ಸಲ್ಮಾನ್ ಖಾನ್‌ಗೂ ಕೊಲೆ ಬೆದರಿಕೆಯ ಕಾರಣ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸದ್ಯ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ತಿಹಾರ್ ಜೈಲಿನಲ್ಲಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ