ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಕೋಲಾರದ ‌ಹೊರವಲಯದಲ್ಲಿ ಈ ದುರ್ಘಟನೆ ಜರುಗಿದೆ.


COMMERCIAL BREAK
SCROLL TO CONTINUE READING

ಕೋಲಾರದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಪ್ರಸಿದ್ಧ ಯೂನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. 


ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ


ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಈ ಅಪಘಾತದಲ್ಲಿ ಅಸುನೀಗಿದ್ದಾರೆ. ಬಂಗಾರಪೇಟೆಯ ಸಾಯಿ ಗಗನ್ ಅಪಾಯದಿಂದ ಪಾರಾಗಿದ್ದಾರೆ. 


ಈ ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


ಇದನ್ನೂ ಓದಿ: ರಾಯಚೂರು: ಚಲಿಸುತ್ತಿದ್ದ ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.