ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ ಸುಧಾರಣೆ

Acid Attack: ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ಥೆ ಆರೋಗ್ಯದಲ್ಲಿ ನಿರೀಕ್ಷೆಗೂ ಮೀರಿ ಸುಧಾರಣೆ ಕಾಣಿಸಿದೆ.

Written by - Chetana Devarmani | Last Updated : Jul 9, 2022, 12:39 PM IST
  • ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ
  • ಸಂತ್ರಸ್ಥೆ ಆರೋಗ್ಯದಲ್ಲಿ ನಿರೀಕ್ಷೆಗೂ ಮೀರಿ ಸುಧಾರಣೆ ಕಾಣಿಸಿದೆ
  • 72 ದಿನದ ಬಳಿಕ ಐಸಿಯುನಿಂದ ನಾರ್ಮಲ್ ಸ್ಪೆಷಲ್ ವಾರ್ಡ್‌ಗೆ ಶಿಫ್ಟ್
ಆ್ಯಸಿಡ್ ದಾಳಿ ಪ್ರಕರಣ : ಯುವತಿ ಆರೋಗ್ಯದಲ್ಲಿ ನಿರೀಕ್ಷೆ ಮೀರಿ ಸುಧಾರಣೆ title=
ಆ್ಯಸಿಡ್ ದಾಳಿ

ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ಥೆ ಆರೋಗ್ಯದಲ್ಲಿ ನಿರೀಕ್ಷೆಗೂ ಮೀರಿ ಸುಧಾರಣೆ ಕಾಣಿಸಿದೆ. 72 ದಿನದ ಬಳಿಕ ಐಸಿಯು ವಾರ್ಡ್ ನಿಂದ ನಾರ್ಮಲ್ ಸ್ಪೆಷಲ್ ವಾರ್ಡ್ ಗೆ ಯುವತಿಯನ್ನು ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Araga Jnanendra : 'ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ'

ದೇಹದ ಮೇಲೆ ಆ್ಯಸಿಡ್ ಬಿದ್ದ ಭಾಗದಲ್ಲಿ ಒಂದು ಹಂತದ ಪ್ಲಾಸ್ಟಿಕ್ ಸರ್ಜರಿ ಮುಗಿದಿದೆ. ಫಿಸಿಯೋಥೆರಪಿಸ್ಟ್ ಸ್ಪೆಷಲಿಸ್ಟ್ ಸಿಬ್ಬಂದಿಯಿಂದ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಒಂದೇ ಡೈರಕ್ಷನ್ ನಲ್ಲಿ ಮಲಗ್ತಿದ್ದ ಯುವತಿಗೆ ಕೈ ಕಾಲು ಆಡಿಸಲು , ಕುಳಿತುಕೊಳ್ಳಲು ಆಗುತ್ತಿದೆ. ಯುವತಿಗೆ ಪೈಪ್ ಮೂಲಕ ಲಘು ನೀರಿನಾಂಶದ ಆಹಾರ ವೈದ್ಯರು ನೀಡುತ್ತಿದ್ದಾರೆ.

ಯುವತಿ ಆರೋಗ್ಯದಲ್ಲಿ ಸುಧಾರಣೆ ಹಿನ್ನೆಲೆ ತಿಂಡಿ- ಊಟ ಸಹ ನೀಡಲಾಗ್ತಿದೆ. ಸರ್ಜರಿ ಸ್ಥಳದಲ್ಲಿ ಇನ್ಫೆಕ್ಷನ್ ಆಗ್ತಿದ್ದ ಹಿನ್ನೆಲೆ ಚಿಕಿತ್ಸೆ ಮುಂದುವರೆದಿದೆ. ಇನ್ನೆರಡು ತಿಂಗಳು ಚಿಕಿತ್ಸೆ ಮುಂದುವರೆಸಬೇಕೆಂದು ಸೆಂಟ್ ಜಾನ್ಸ್ ಆಸ್ಪತ್ರೆ  ವೈದ್ಯರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: Karnataka Rain : ರಾಜ್ಯಾದ್ಯಂತ ಮುಂದುವರೆದ ಮಳೆ ಆರ್ಭಟ : ಇನ್ನೂ 5 ದಿನ ಭಾರಿ ಮಳೆ!

ದಿನದಿಂದ ದಿನಕ್ಕೆ ಮಗಳ ಆರೋಗ್ಯದಲ್ಲಿ ಸುಧಾರಣೆ ಹಿನ್ನೆಲೆ ಪೋಷಕರಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಪಿ ನಾಗೇಶ್ ಯುವತಿಗೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸ್ರು ಆರೋಪಿ ಬಂಧಿಸಿದ್ರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News