ಬೆಂಗಳೂರು: ನಗರದಲ್ಲಿ ರಾಬರಿ ಹಾಗೂ ಮನೆಗಳ್ಳತನ ಪ್ರಕರಣಗಳು ಕಂಟ್ರೋಲ್ ಗೆ ಬಂದಿದೆ. ಅಂಕಿ ಅಂಶಕಗಳನ್ನ ನೋಡಿದಾಗ ಕ್ರೈಂ ರೇಟ್ ಕಡಿಮೆ ಆಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿಕೆ ನೀಡಿದ್ದಾರೆ. ಚಾಮರಾಜಪೇಟೆಯ ಸಿಎಆರ್ ಮೈದಾನದಲ್ಲಿ ಸೇವಾ ಕವಾಯತು ಗೌರವ ಸ್ವೀಕರಿಸಿ ಮಾತನಾಡಿದರು. 
ಕಾಲೇಜು ಆವರಣದೊಳಗೆ ಡ್ರಗ್ ಸಪ್ಲೈ ವಿಚಾರವಾಗಿ ಪ್ರತಿಕ್ರಿಯಿಸಿ,ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿದ್ದೇವೆ.


COMMERCIAL BREAK
SCROLL TO CONTINUE READING

ಕಾಲೇಜು ಬಳಿ ಪೊಲೀಸರಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಡ್ರಗ್ಗ್ ಪೆಡ್ಲಿಂಗ್ ನಲ್ಲಿ ತೊಡಗಿರುವವ ವಿರುದ್ದ ಕ್ರಮವಾಗುತ್ತೆ ಎಂದರು. ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.‌ ನಾನು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದಾಗಿ ಕೆಲಸ ಮಾಡುತಿದ್ದೀರಿ. ಹೊಸದಾಗಿ ಜಾರಿಗೆ ತಂದ ನಿಯಮಗಳ ಪಾಲನೆ ಸಹ ಉತ್ತಮವಾಗಿ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ನಗರ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಪುನರ್ ಪರಿಶೀಲನೆ
 
ಪೊಲೀಸರು ಸಮಾಜದ ರಕ್ಷಕರಾಗಿದ್ದು, ನೊಂದವರ ಕಣ್ಣೀರು ಒರೆಸಿ, ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ಠಾಣೆಗಳಲ್ಲಿ ಲೋಕಸ್ಪಂದನ ಮೂಲಕ ದೂರುದಾರರ ಅಭಿಪ್ರಾಯ ಸಂಗ್ರಹ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಬ್ಬಂದಿ ಕೆಲಸದ ಬಗ್ಗೆ ಲೋಕಸ್ಪಂದನ ಮೂಲಕ ಅಭಿಪ್ರಾಯ ಪಡೆಯಲಾಗುತ್ತಿದೆ. ಕಳೆದ ಒಂದು ತಿಂಗಳಿಂದ ವ್ಯವಸ್ಥೆ ಮಾಡಲಾಗಿದೆ. ದೂರುದಾರರುಗಳಿಂದ ಲೋಕಸ್ಪಂದನದಲ್ಲಿ ಅಭಿಪ್ರಾಯಗಳು ಹೆಚ್ಚಾಗಿ ಬರುತ್ತಿವೆ. ನಿರೀಕ್ಷೆಗೂ ಮೀರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.