ಬೆಂಗಳೂರು : ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಒಂಟಿ ಮಹಿಳೆ ಕೊಂದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಮಂಡ್ಯ ಮೂಲದ ಕೌಸರ್ ಮುಬೀನಾಳನ್ನು ಹತ್ಯೆಗೈದ ಆರೋಪದಡಿ ಆಕೆಯ ಜೊತೆ ಲಿವಿಂಗ್ ರಿಲೇಷನ್ಶಿಪನಲ್ಲಿದ್ದ ನದೀಮ್ ಪಾಷ ಎಂಬಾತನನ್ನು ಬಂಧಿಸಲಾಗಿದೆ.


COMMERCIAL BREAK
SCROLL TO CONTINUE READING

ಕೌಸರ್ ಬೇರೊಬ್ಬರ ಜೊತೆ ಮದುವೆಯಾಗಿ ಗಂಡನಿಂದ ಡೈವರ್ಸ್ ಪಡೆದಿದ್ದಳು. ನದೀಮ್ ಗೂ ಸಹ ಮದುವೆಯಾಗಿ ಹೆಂತಿಯಿಂದ ದೂರವಾಗಿದ್ದ. ದೂರದ ಸಂಬಂಧಿಕರಾಗಿದ್ದ ಕೌಸರ್ ನೊಂದಿಗೆ ನಾಲ್ಕು ವರ್ಷಗಳ ಹಿಂದೆ ಪರಿಚಯವಾಗಿ ಕಳೆದೊಂದು ವರ್ಷದಿಂದ ನದೀಮ್ ಅಶೋಕನಗರದ ನಂಜಪ್ಪ ಸರ್ಕಲ್ ನಲ್ಲಿ ಮನೆ ಮಾಡಿಕೊಂಡು ಒಟ್ಟಿಗೆ ವಾಸವಾಗಿದ್ದರು. ಕೆಲ ದಿನಗಳ ಹಿಂದೆ ಕೌಸರ್ ಬರ್ತ್ ಡೇ‌ ಇದ್ದಿದ್ದರಿಂದ ಒಟ್ಟಿಗೆ ಹೊರಗೆ ಹೋಗಿ ಊಟ ಮಾಡುವ ಪ್ಲ್ಯಾನ್ ಮಾಡಿಕೊಂಡಿದ್ದರು.


ಇದನ್ನೂ ಓದಿ: ಸೇವಾ ನ್ಯೂನ್ಯತೆ ಹಿನ್ನೆಲೆ, ಕೋ ಆಪ್ ಸೋಸಾಯಿಟಿಗೆ 1.70 ಲಕ್ಷ ರೂ ದಂಡ ವಿಧಿಸಿದ ಗ್ರಾಹಕರ ಆಯೋಗ


ಮೆಕ್ಯಾನಿಕ್ ಕೆಲಸ‌ ಮುಗಿಸಿಕೊಂಡು ಮನೆಗೆ ಬರುವಾಗ ಕೌಸರ್ ಗೆ ಬರ್ತ್ ಡೇ ಸಲುವಾಗಿ ಗಿಫ್ಟ್ ಕೊಟ್ಟು ವಿಶ್ ಮಾಡಿದ್ದ. ಬೆಳ್ಳಿ ಚೈನ್ ಗಿಫ್ಟ್ ಪಡೆದ ಕೌಸರ್, ಚಿನ್ನದ ಸರ ಕೊಡಬೇಕಿತ್ತು ಎಂದಿದ್ದಾಳೆ.‌ ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿ ಗಲಾಟೆಗೆ ಕಾರಣವಾಗಿತ್ತು. ಕಳೆದ ಸೋಮವಾರ ಮನೆಗೆ ಬಂದಿದ್ದಾಗ ಇಬ್ಬರ ನಡುವೆ ಮತ್ತೆ ಗಲಾಟೆಯಾಗಿ ತಾರಕಕ್ಕೇರಿದೆ‌‌‌. ಈ ವೇಳೆ ರೊಚ್ಚಿಗೆದ್ದಿದ್ದ ನದೀಮ್ ಮನೆಯಲ್ಲಿದ್ದ ಚಾಕುವಿನಿಂದ ಕೌಸರ್ ಕುತ್ತಿಗೆ ಸೀಳಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಕಾರ್ಯಾಚರಣೆ ನಡೆಸಿದ್ದ ಅಶೋಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.