ಬೆಂಗಳೂರಿನಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ  

ರಾಜ್ಯ ರಾಜಧಾನಿಯಲ್ಲಿ ವ್ಯಕ್ತಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 

Written by - VISHWANATH HARIHARA | Edited by - Manjunath N | Last Updated : Dec 4, 2022, 10:45 PM IST
  • ಕೊಲೆಯಾದ ವ್ಯಕ್ತಿಯ ಗುರುತು ಸಹ ಇನ್ನೂ ಪತ್ತೆಯಾಗಿಲ್ಲ.
  • ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ.
  • ಪರಿಚಯಸ್ಥರೇ ಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹತ್ಯೆಗೆ ನಿಖರ ಕಾರಣ ಸಹ ಗೊತ್ತಾಗಿಲ್ಲ.
ಬೆಂಗಳೂರಿನಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ   title=
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವ್ಯಕ್ತಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿ ಸುಮಾರು 30 ವರ್ಷದವನಾಗಿದ್ದು, ಕೆಪಿ ಅಗ್ರಹಾರದ ಹೇಮಂತ್ ಮೆಡಿಕಲ್ ಬಳಿ ಕಳೆದ ರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯ ಗುರುತು ಸಹ ಇನ್ನೂ ಪತ್ತೆಯಾಗಿಲ್ಲ.ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಪರಿಚಯಸ್ಥರೇ ಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹತ್ಯೆಗೆ ನಿಖರ ಕಾರಣ ಸಹ ಗೊತ್ತಾಗಿಲ್ಲ.

ಇದನ್ನೂ ಓದಿ : KL Rahul: ರಾಹುಲ್ ಇನ್ಮುಂದೆ ವಿಕೆಟ್ ಕೀಪರ್! ರೋಹಿತ್ ಇಟ್ಟ ಹೆಜ್ಜೆ ಟೀಂ ಇಂಡಿಯಾಗೆ ಸಹಕಾರಿಯೇ?

ಸದ್ಯ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ, ಇನ್ನೂ ಘಟನಾ ಸ್ಥಳಕ್ಕೆ ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸಿದ್ದು, ಘಟನಾ ಸ್ಥಳದ ಸುತ್ತಮುತ್ತಾ ಸಿಸಿಟಿವಿ ಕ್ಯಾಮರ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News