Bengaluru Crime: ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಫೈನಾನ್ಶಿಯರ್ ಬರ್ಬರ ಹತ್ಯೆ!

Bengaluru Crime News: ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಸಾಲವಾಗಿ ಹಣ ನೀಡಿದ್ದ.

Written by - VISHWANATH HARIHARA | Edited by - Puttaraj K Alur | Last Updated : Feb 8, 2023, 12:05 PM IST
  • ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಚಾಕು ಇರಿದು ಯುವಕನ ಬರ್ಬರ ಹತ್ಯೆ
  • ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿರುವ ಘಟನೆ
  • ಯುವಕನಿಗೆ ಚಾಕು ಇರಿದು ಎಸ್ಕೇಪ್ ಆಗಿರುವ ಆರೋಪಿಗಳು
Bengaluru Crime: ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಫೈನಾನ್ಶಿಯರ್ ಬರ್ಬರ ಹತ್ಯೆ! title=
ಚಾಕು ಇರಿದು ಯುವಕನ ಬರ್ಬರ ಹತ್ಯೆ!

ಬೆಂಗಳೂರು: ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಡರಾತ್ರಿ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಮೃತಪಟ್ಟ ಯುವಕ.

ಇದನ್ನೂ ಓದಿ: 23 ದಿನಗಳ ಬಳಿಕ ಹೂತಿದ್ದ ಶವ ಹೊರತೆಗೆದ ಖಾಕಿ: ಕಾರಣ..?

ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಸಾಲವಾಗಿ ಹಣ ನೀಡಿದ್ದ. ತಡರಾತ್ರಿ ಕುಡಿದ ಅಮಲಿನಲ್ಲಿ ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಶೇಖರ್ ಕೇಳಿದ್ದಾನೆ‌. ಸ್ನೇಹಿತರ ಜೊತೆ ಬಂದಿದ್ದ ಮನೋಜ್ 'ಸಾಲ ವಾಪಸ್ ಕೊಡಲ್ಲ, ಏನ್ ಮಾಡ್ಕೊತಿಯೋ ಮಾಡ್ಕೋ' ಎಂದು ಶೇಖರ್ ಜೊತೆ ಗಲಾಟೆ ಶುರು ಮಾಡಿದ್ದ. ಈ ವೇಳೆ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದಾಗ ಮನೋಜ್ ಹಾಗೂ ಆತನ ಸ್ನೇಹಿತರು ಶೇಖರ್‍ನ ಹೊಟ್ಟೆ ಭಾಗಕ್ಕೆ ಮೂರ್ನಾಲ್ಕು ಕಡೆ ಚಾಕು ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಶೇಖರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ಗ್ಯಾಸ್ ಲೀಕೆಜ್ ನಿಂದ ಬೆಂಕಿ, ಮಹಿಳೆ ಸಾವು: ಇತ್ತ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ..

ಸದ್ಯ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಾಣಸವಾಡಿ ಪೊಲೀಸರು ಎಸ್ಕೇಪ್ ಆಗಿರುವ ಆರೋಪಿ ಮನೋಜ್ ಹಾಗೂ ಆತನ ಸ್ನೇಹಿತರಿಗಾಗಿ ಬಲೆ ಬೀಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News