ಬೆಂಗಳೂರು: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆ ಶ್ರೀಗಳನ್ನು ಬಂಧಿಸಿರುವ ಪೊಲೀಸರು ಚಿತ್ರದುರ್ಗ ಪೊಲೀಸ್ ಠಾಣೆಯತ್ತ ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಪೋಕ್ಸೋ ಕಾಯ್ದೆಯಡಿ ಶ್ರೀಗಳ ವಿರುದ್ಧ ಪ್ರಕರಣ


ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಆಗಸ್ಟ್‌ 26ರಂದು ಶ್ರೀಗಳು ಸೇರಿದಂತೆ ಐವರ ವಿರುದ್ಧ ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ  FIR ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ನೆರವು ಪಡೆದು ಶ್ರೀಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಬಳಿಕ ಈ ಪ್ರಕರಣವು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು.


ಮುರುಘಾ ಶ್ರೀಗಳು A-1 ಆರೋಪಿ


ಫೋಕ್ಸೋ ಪ್ರಕರಣದಡಿ ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಮುರುಘಾಶ್ರೀಗಳು A-1 ಆರೋಪಿಯಾದರೆ, A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದಾರೆ. A-3 ಆರೋಪಿ ಮಠದ ಉತ್ತರಾಧಿಕಾರಿ ಬಸವಾದಿತ್ಯ , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.