ಬಿಟ್ ಕಾಯಿನ್ ಕೇಸ್ ಗೆ ಮತ್ತೆ ಮರುಜೀವ: ಉನ್ನತ ಮಟ್ಟದ ತನಿಖೆಗೆ ನಗರ ಪೊಲೀಸ್ ಆಯುಕ್ತರ ಪತ್ರ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಕೈ ಸರ್ಕಾರ ಮರುಜೀವ ನೀಡುತ್ತಿದೆ.ಹೀಗಾಗಿ ದೊಡ್ಡವರ ಎದೆಯಲ್ಲಿ ನಡುಕ ಶುರುವಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಇದೇ ಕೇಸ್ ಹಲವು ತಿರುವುಗಳನ್ನ ಪಡೆದುಕೊಂಡಿತ್ತು.ಕಾಂಗ್ರೆಸ್ ಸರ್ಕಾರ ಬಿಜೆಪಿ ಮೇಲೆ‌ ಆರೋಪಗಳ ಬಾಣವನ್ನೇ ಬಿಟ್ಟಿತ್ತು.ಪ್ರಕರಣದ ತನಿಖೆ ನಡೆಸಿದ ಸಿಸಿಬಿ ತರಾತುರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು‌.ಅಂದೇ ಸಿಸಿಬಿ ತನಿಖೆ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು.‌ಅದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದಲ್ಲಿ ನಡೆದ ಕೇಸ್ ಗೆ ಚಕ್ ಮೇಟ್ ಇಟ್ಟಿದೆ.‌ಬಿಟ್ ಕಾಯಿನ್ ಕೇಸ್ ಗೆ ಮರು ತನಿಖೆಯ ಬಾಣ ಬಿಟ್ಟಿದೆ.

Written by - VISHWANATH HARIHARA | Edited by - Manjunath N | Last Updated : Jun 27, 2023, 04:49 PM IST
  • ಇದರ ನಡುವೆಯೇ ರಾಜ್ಯ ಸರ್ಕಾರದ ಇ–ಸಂಗ್ರಹಣಾ ಪೋರ್ಟಲ್‌ ಜಾಲತಾಣವನ್ನೂ ಶ್ರೀಕಿ ಹ್ಯಾಕ್ ಮಾಡಿ 46 ಕೋಟಿ ದೋಚಿದ್ದ ಸಂಗತಿ ಹೊರಬಿದ್ದಿತ್ತು.‌
  • ಹ್ಯಾಕ್ ಮಾಡಿ ಗಳಿಸಿದ್ದ ಹಣ,ಬಿಟ್‌ ಕಾಯಿನ್‌ ರೂಪದಲ್ಲಿ ಹೂಡಿಕೆಯಾಗಿದ್ದ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿತ್ತು. ಆದರೆ ಆ ಬಗ್ಗೆ ಹೆಚ್ಚಿನ ತನಿಖೆ ನಡೆದಿರಲಿಲ್ಲ
  • ಇದೀಗ ಬಿಟ್‌ ಕಾಯಿನ್ ಪ್ರಕರಣದ ಮರು ತನಿಖೆಗೆ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.
ಬಿಟ್ ಕಾಯಿನ್ ಕೇಸ್ ಗೆ ಮತ್ತೆ ಮರುಜೀವ: ಉನ್ನತ ಮಟ್ಟದ ತನಿಖೆಗೆ ನಗರ ಪೊಲೀಸ್ ಆಯುಕ್ತರ ಪತ್ರ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಕೈ ಸರ್ಕಾರ ಮರುಜೀವ ನೀಡುತ್ತಿದೆ.ಹೀಗಾಗಿ ದೊಡ್ಡವರ ಎದೆಯಲ್ಲಿ ನಡುಕ ಶುರುವಾಗಿದೆ. ಬಿಜೆಪಿ ಸರ್ಕಾರದಲ್ಲಿ ನಡೆದ ಇದೇ ಕೇಸ್ ಹಲವು ತಿರುವುಗಳನ್ನ ಪಡೆದುಕೊಂಡಿತ್ತು.ಕಾಂಗ್ರೆಸ್ ಸರ್ಕಾರ ಬಿಜೆಪಿ ಮೇಲೆ‌ ಆರೋಪಗಳ ಬಾಣವನ್ನೇ ಬಿಟ್ಟಿತ್ತು.ಪ್ರಕರಣದ ತನಿಖೆ ನಡೆಸಿದ ಸಿಸಿಬಿ ತರಾತುರಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು‌.ಅಂದೇ ಸಿಸಿಬಿ ತನಿಖೆ ಮೇಲೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು.‌ಅದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದಲ್ಲಿ ನಡೆದ ಕೇಸ್ ಗೆ ಚಕ್ ಮೇಟ್ ಇಟ್ಟಿದೆ.‌ಬಿಟ್ ಕಾಯಿನ್ ಕೇಸ್ ಗೆ ಮರು ತನಿಖೆಯ ಬಾಣ ಬಿಟ್ಟಿದೆ.

ಇದನ್ನೂ ಓದಿ: ವರ್ಕ್ ಆಯ್ತು ಸೇಫ್ಟಿ ಐಲ್ಯಾಂಡ್: ಪತ್ತೆಯಾಯ್ತು ಮಾಲ್ಡೀವ್ಸ್ ಪ್ರಜೆಯ ಬ್ಯಾಗ್..!

ಬಿಟ್ ಕಾಯಿನ್ ಕೇಸ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.ಬೆಂಗಳೂರಿನ ಕೆಂಪೇಗೌಡ ನಗರ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಿಟ್‌ ಕಾಯಿನ್ ಜಾಲದ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದ. ಈತ ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಎಂಬ ಸಂಗತಿಯೂ ಗೊತ್ತಾಗಿತ್ತು. ಇದಾದ ನಂತರ ಕಾಟನ್‌ಪೇಟೆ ಠಾಣೆಯಲ್ಲಿ ಬಿಟ್‌ ಕಾಯಿನ್ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ  ಸಲ್ಲಿಸಿದ್ದಾರೆ.

ಇದರ ನಡುವೆಯೇ ರಾಜ್ಯ ಸರ್ಕಾರದ ಇ–ಸಂಗ್ರಹಣಾ ಪೋರ್ಟಲ್‌ ಜಾಲತಾಣವನ್ನೂ ಶ್ರೀಕಿ ಹ್ಯಾಕ್ ಮಾಡಿ 46 ಕೋಟಿ ದೋಚಿದ್ದ ಸಂಗತಿ ಹೊರಬಿದ್ದಿತ್ತು.‌ಹ್ಯಾಕ್ ಮಾಡಿ ಗಳಿಸಿದ್ದ ಹಣ,ಬಿಟ್‌ ಕಾಯಿನ್‌ ರೂಪದಲ್ಲಿ ಹೂಡಿಕೆಯಾಗಿದ್ದ ಮಾಹಿತಿ ತನಿಖಾ ತಂಡಕ್ಕೆ ಲಭ್ಯವಾಗಿತ್ತು. ಆದರೆ ಆ ಬಗ್ಗೆ ಹೆಚ್ಚಿನ ತನಿಖೆ ನಡೆದಿರಲಿಲ್ಲ. ಇದೀಗ ಬಿಟ್‌ ಕಾಯಿನ್ ಪ್ರಕರಣದ ಮರು ತನಿಖೆಗೆ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಬಿಟ್ ಕಾಯಿನ್ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೊಳಪಡಿಸುವಂತೆ ರಾಜ್ಯ ಡಿಜಿ & ಐಜಿಪಿ ಅಲೋಕ್ ಮೋಹನ್ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪತ್ರ ಬರೆದಿದ್ದಾರೆ.‌ಹಗರಣದ ಹಿಂದೆ ಅಂತರಾಷ್ಟ್ರೀಯ ಮಟ್ಟದ ವಂಚನೆ ಜಾಲವಿರುವ ಸಂಶಯವಿದ್ದು, ಪ್ರಕರಣದ ತನಿಖೆಯನ್ನ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಚೇಸ್ ಮಾಡಿ ಹಿಡಿದ KSRTC ನಿರ್ವಾಹಕ,ಚಾಲಕ..!

ಸದ್ಯ ಬಿಟ್ ಕಾಯಿನ್ ಮರು ತನಿಖೆಗೆ ಪತ್ರ ಬರೆದಿರೋದು ಸಿಸಿಬಿ ತನಿಖೆಯನ್ನೇ ಪ್ರಶ್ನೆ ಮಾಡಿದಂತಿದೆ.‌ಅಲ್ಲದೇ ಹಗರಣದಲ್ಲಿ  ದೊಡ್ಡ ದೊಡ್ಡ ಮಿಕಗಳ ಕೈವಾಡವಿರುವ ಶಂಕೆ‌ ವ್ಯಕ್ತವಾಗಿದ್ದು, ನಡುಕ ಶುರುವಾಗಿದೆ ಎನ್ನಲಾಗಿದೆ.

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

 

Trending News