ಪತ್ನಿಯ ಅನೈತಿಕ ಸಂಬಂಧ ಶಂಕೆ: ಗುಂಡು ಹಾರಿಸಿ ಮೂವರು ಮಕ್ಕಳನ್ನ ಕೊಂದ ಬಿಜೆಪಿ ನಾಯಕ!!

UP Crime News: ಈ ಘಟನೆಯಿಂದ ಯೋಗೇಶ್‌ ಮನೆಯ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಒಬ್ಬೊಬ್ಬರ ಮೇಲೆ ಗುಂಡಿ ಹಾರಿಸುತ್ತಾ ಯೋಗೇಶ್‌ ಅವರನ್ನ ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ಎಸೆಯುತ್ತಿದ್ದನಂತೆ. 

Written by - Puttaraj K Alur | Last Updated : Mar 23, 2025, 07:25 PM IST
  • ಪತ್ನಿಯ ಮೇಲಿನ ಅನೈತಿಕ ಸಂಬಂಧ ಶಂಕೆಯಿಂದ ರೊಚ್ಚಿಗೆದ್ದ ಬಿಜೆಪಿ ನಾಯಕ
  • ಪತ್ನಿ ಸೇರಿದಂತೆ ಮೂವರು ಮಕ್ಕಳ ಮೇಲೆ ಭೀಕರವಾಗಿ ಗುಂಡಿನ ದಾಳಿ
  • ಗುಂಡಿನ ದಾಳಿಗೆ ಮೂವರು ಮಕ್ಕಳು ಸಾವು, ಗಂಭೀರ ಸ್ಥಿತಿಯಲ್ಲಿರುವ ಪತ್ನಿ
ಪತ್ನಿಯ ಅನೈತಿಕ ಸಂಬಂಧ ಶಂಕೆ: ಗುಂಡು ಹಾರಿಸಿ ಮೂವರು ಮಕ್ಕಳನ್ನ ಕೊಂದ ಬಿಜೆಪಿ ನಾಯಕ!!
ಗುಂಡಿಕ್ಕಿ ಮಕ್ಕಳನ್ನ ಕೊಂದ ಬಿಜೆಪಿ ನಾಯಕ!!

Uttar pradesh: ತನ್ನ ಪತ್ನಿಯ ಮೇಲಿನ ಅನೈತಿಕ ಸಂಬಂಧ ಶಂಕೆಯಿಂದ ಬಿಜೆಪಿ ನಾಯಕನೊಬ್ಬ ತನ್ನ ಮೂವರು ಮಕ್ಕಳಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನೆಯಲ್ಲಿ ಗುಂಡು ತಗುಲಿ ಆತನ ಪತ್ನಿಗೂ ಗಂಭೀರ ಗಾಯಗಳಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

Add Zee News as a Preferred Source

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ತನ್ನ ಪತ್ನಿ ಮತ್ತು ಮೂವರು ಮಕ್ಕಳಿಗೆ ಗುಂಡಿಕ್ಕಿದ್ದಾನೆ. ವರದಿಯ ಪ್ರಕಾರ, 11 ವರ್ಷದ ಪುತ್ರಿ ಶ್ರದ್ಧಾ ಹಾಗೂ ಇಬ್ಬರು ಪುತ್ರರಾದ ಶಿವಾಂಶ್ ಮತ್ತು ದೇವಾಂಶ್ ಈ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಆತನ ಪತ್ನಿ ನೇಹಾ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಇದನ್ನೂ ಓದಿ: ಮದುವೆ ಅಂದ್ರೆ ಭಯ ಆಗೋದು ಇದಕ್ಕೆ.. ಗಂಡನ ನಾಲಿಗೆಯನ್ನ ತನ್ನ ಬಾಯಿಂದ ಕಚ್ಚಿ ಕಟ್‌ ಮಾಡಿದ ಹೆಂಡತಿ..! ಕಾರಣವೇನು ಗೊತ್ತೆ..?

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹುದ್ದೆ ಹೊಂದಿರುವ ಆರೋಪಿ ಯೋಗೇಶ್‌ನನ್ನ ಘಟನಾ ಸ್ಥಳದಲ್ಲೇ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಲಾದ ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ವಿಷಯ ತಿಳಿದು ಸಹರಾನ್‌ಪುರ SSP ರೋಹಿತ್ ಸಜ್ವಾನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯೋಗೇಶ್‌ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಗುಂಡಿನ ದಾಳಿ ನಡೆಸಿದ್ದಾನೆ ಅಂತಾ SSP ಸಜ್ವಾನ್ ತಿಳಿಸಿದ್ದಾರೆ.

ಪತ್ನಿಯ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಯೋಗೇಶ್, ತನ್ನ ಹೆಂಡತಿ ಮತ್ತು ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಪತ್ನಿ ಮತ್ತು ಮೂರನೇ ಮಗುವನ್ನು ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪತ್ನಿಯ ಸ್ಥಿತಿ ಗಂಭೀರವಾಗಿದ್ದರೆ, ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಯ್ಯೋ ಶಿವನೇ... 25 ವರ್ಷದ ಸುಂದರಿ ಕೈಹಿಡಿದ ಜಸ್ಟ್‌ 91 ವರ್ಷದ ಅಜ್ಜ..! ವಿಡಿಯೋ ನೋಡಿ ಹೊಟ್ಟೆ ಉರಿಯುತ್ತೆ..

ಕೃತ್ಯದ ನಂತರ ಯೋಗೇಶ್ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿದ್ದನಂತೆ. ಪೊಲೀಸರು ಸ್ಥಳಕ್ಕೆ ತಲುಪಿ ಆತನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮತ್ತು ಘಟನೆಯ ನಿಖರ ಮಾಹಿತಿ ಕಲೆ ಹಾಕಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಈ ಘಟನೆಯಿಂದ ಯೋಗೇಶ್‌ ಮನೆಯ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಒಬ್ಬೊಬ್ಬರ ಮೇಲೆ ಗುಂಡಿ ಹಾರಿಸುತ್ತಾ ಯೋಗೇಶ್‌ ಅವರನ್ನ ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ಎಸೆಯುತ್ತಿದ್ದನಂತೆ. ಗುಂಡಿನ ಸದ್ದು ಕೇಳಿದ ಅಲ್ಲಿನ ಜನರು ಬೆಚ್ಚಿಬಿದ್ದಿದ್ದರಂತೆ. ನೇಹಾ ಮತ್ತು ಮಕ್ಕಳು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಆಘಾತಕ್ಕೊಳಗಾಗಿದ್ದಾರಂತೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News