ಚಾಮರಾಜನಗರ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ (Neha Hiremath Murder) ನಮಗೆ ಲವ್ ಜಿಹಾದ್ ಅನ್ನಿಸುತ್ತಿದೆ, ತನಿಖೆಗೂ ಮುನ್ನವೇ ನೀವ್ಯಾಕೆ ಇಲ್ಲಾ ಅಂಥೀರಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah), ಗೃಹ ಸಚಿವ ಪರಮೇಶ್ವರ್ ವಿರುದ್ಧ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹರಿಹಾಯ್ದಿದ್ದಾರೆ. 


COMMERCIAL BREAK
SCROLL TO CONTINUE READING

ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.


ಇದನ್ನೂ ಓದಿ- Kali River Tragedy: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!


ನರೇಂದ್ರ ಮೋದಿ (Narendra Modi) ಪರವಾಗಿ ಹಾಡು ಹಾಡಿದ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಯಾವ ರೀತಿ ಕಾನೂನು ಸುವ್ಯವಸ್ಥೆ ಇದು, ಮತದಾರರ ಬಳಿ ಈ ವಿಚಾರ ತೆಗೆದುಕೊಂಡು ಹೋಗುತ್ತೇವೆ, ಮತದಾರರೇ ತೀರ್ಮಾನ ಮಾಡುತ್ತಾರೆ ಎಂದು ಹರಿಹಾಯ್ದರು.


ಇದನ್ನೂ ಓದಿ- ನೇಹಾ ಹತ್ಯೆ ಪ್ರಕರಣ: ಗಳಗಳನೇ ಅತ್ತ ದಿಂಗಾಲೇಶ್ವರ ಸ್ವಾಮೀಜಿ


ಇನ್ನು, ರಸ್ತೆತಡೆ ನಡೆಸಿದ್ದರಿಂದ 1 ತಾಸಿಗೂ ಅಧಿಕ ಕಾಲ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.