ವಿಜಯನಗರ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಹಾಡು ಹಗಲೇ ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಆನಂದಳ್ಳಿ ಬಸವರಾಜ್ (26) ಎಂಬ ಯುವಕ ಕೊಲೆಯಾಗಿದ್ದಾನೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಲುಗೋಡು ಗ್ರಾಮದಲ್ಲಿ ಘಟನೆ ಜರುಗಿದೆ. 


COMMERCIAL BREAK
SCROLL TO CONTINUE READING

ಕೊಲೆ ಮಾಡಿದ ವ್ಯಕ್ತಿ ಚಿಲುಗೋಡು ಗ್ರಾಮದ ಬಸರಕೋಡು ಪಕ್ಕೀರಸ್ವಾಮಿ. ಕೊಲೆಯಾದ ಬಸವರಾಜ್ ಎಂಬ ಯುವಕ ಪಕ್ಕೀರಸ್ವಾಮಿ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ತಂಬ್ರಹಳ್ಳಿ ಠಾಣೆಯಲ್ಲಿ ನನ್ನ ಹೆಂಡತಿ ಕಾಣೆ ಆಗಿದ್ದಾಳೆ ಎಂದು ಬಸರಕೋಡು ಪಕ್ಕೀರಸ್ವಾಮಿ ದೂರು ನೀಡಿದ್ದರು.


ಇದನ್ನೂ ಓದಿ : ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಹಾವಳಿ


ತಿಂಗಳ ಬಳಿಕ ಆನಂದಳ್ಳಿ ಬಸವರಾಜ್ ಮತ್ತು ಪಕ್ಕೀರಸ್ವಾಮಿ ಹೆಂಡತಿಯನ್ನು ಪೋಲಿಸರು ಪತ್ತೆ ಮಾಡಿ ಠಾಣೆಗೆ ಕರೆ ತಂದಿದ್ದರು. ಬಳಿಕ ರಾಜಿ ಪಂಚಾಯತಿ ಮೂಲಕ ಪರಸ್ಪರ ಮುಚ್ಚಳಿಕೆ ಪತ್ರ ಬರೆದು ಕೊಟ್ಟು ಪಕ್ಕೀರಸ್ವಾಮಿ ತನ್ನ ಹೆಂಡತಿಯೊಂದಿಗೆ ಜೀವನ ನಡೆಸುತ್ತಿದ್ದರು. ಊರು ತೊರೆದಿದ್ದ ಬಸವರಾಜ್ ಕೆಲದಿನಗಳಿಂದ ಮತ್ತೆ ಊರಿಗೆ ಬಂದಿದ್ದನು.


ತನ್ನ ಹೆಂಡತಿಯೊಂದಿಗೆ ಮತ್ತೆ ಸಂಬಂಧ ಇದೆ ಎಂಬ ಶಂಕೆಯಿಂದ ಬಸವರಾಜ್ ನನ್ನು ಹಾಡು ಹಗಲೇ ಕೊಡಲಿಯಿಂದ ತಲೆ ಮತ್ತು ಕುತ್ತಿಗೆಗೆ ಹೊಡೆದು ಪಕ್ಕೀರಸ್ವಾಮಿ ಕೊಲೆ ಮಾಡಿದ್ದಾನೆ. ಬಳಿಕ ಓಡಿ ಹೋಗಿ ನಡು ರಸ್ತೆಯಲ್ಲಿ ಕೊಡಲಿ ಬಿಟ್ಟು ತಂಬ್ರಹಳ್ಳಿ ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.


ಘಟನಾ ಸ್ಥಳಕ್ಕೆ ಸಿಪಿಐ ವಿಕಾಸ್ ಲಮಾಣಿ ತಂಬ್ರಹಳ್ಳಿ ಪೋಲಿಸ್ ಇನ್ಸ್ಪೆಕ್ಟರ್ ಗುರುಚಂದ್ರ ಯಾದವ್ ಹಾಗೂ ಸಿಬ್ಬಂದಿ ಆಗಮಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ : ಹನಿಟ್ರ್ಯಾಪ್ ಗ್ಯಾಂಗ್ ಬಂಧಿಸಿದ ಸಿಸಿಬಿ ಪೊಲೀಸರು..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.