ಚಾಮರಾಜನಗರ: ಬಂಡೀಪುರದಲ್ಲಿ ಪ್ರವಾಸಿಗರ ನಡುವೆ ಜಟಾಪಟಿ ನಡೆದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ.
 
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ‌ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಕಾವಾಡಿ ದಂಪತಿಗೆ ಮಗಳಾದ ಆನೆ... ಬಂಡೀಪುರದಲ್ಲೊಂದು ಎಲಿಫೆಂಟ್ ವಿಸ್ಪರರ್ಸ್


ಟ್ವೀಟ್ ಗಮನಿಸಿದ ಎಡಿಜಿಪಿ ಅಲೋಕ್ ಕುಮಾರ್ ಚಾಮರಾಜನಗರ ಪೊಲೀಸ್ ಸಿಬ್ಬಂದಿ ಜೊತೆ ಮಾತನಾಡಿ ಈ ಕುರಿತಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ, ಗುಂಡ್ಲುಪೇಟೆ  ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.‌ 


ಟ್ವೀಟರ್ ನಲ್ಲಿ ನೆಟ್ಟಿಗರ‌ ಮಿಶ್ರ ಪ್ರತಿಕ್ರಿಯೆ: 
ಟ್ವಿಟರ್ ನಲ್ಲಿ ಥರ್ಡ್ ಐ ಖಾತೆದಾರ ವೀಡಿಯೋ ಹಂಚಿಕೊಂಡಿರುವುದಕ್ಕೆ ನೆಟ್ಟಿಗರು ಮಿಶ್ರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಯಾವ ಪ್ರವಾಸಿಗರೂ ಸುಖಾಸುಮ್ಮನೆ ಕಾರು ಅಡ್ಡಹಾಕಿ ಬೈಯ್ಯುವುದಿಲ್ಲ, ಕೇರಳ ಮೂಲದ ವ್ಯಕ್ತಿ ಏನೋ ಕಿರಿಕ್ ಮಾಡಿದ್ದರಿಂದ ಕುಪಿತಗೊಂಡು ಹೊಡೆರಬಹುದು ಎಂದು ಕೆಲವರು ನೆಟ್ಟಿಗರು ಪ್ರತಿಕ್ರಿಯಿಸಿದ್ದು ಒಂದು ದೃಷ್ಟಿಕೋನದಿಂದ ತನಿಖೆ ನಡೆಸದೇ ಯುವಕರು ಯಾಕೆ ಆ ರೀತಿ ಮಾಡಿದರು ಎಂಬುದನ್ನೂ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ- ಬಂಡೀಪುರ ಕಾಡಲ್ಲಿ ಮೂರು ಚಿರತೆ ಸಾವು- 1 ಚಿರತೆ ವಿಷಪೂರಿತ ಮಾಂಸ ತಿಂದು ಮೃತ


ದೂರಿನಲ್ಲಿ ಏನಿದೆ?
ಕಳೆದ ಜೂ.17 ರಂದು ಬೆಂಗಳೂರಿನಿಂದ ಕೇರಳಕ್ಕೆ ತೆರಳುವಾಗ ಯುವಕರ ಜೀಪಿಗೆ ಓವರ್ ಟೇಕ್ ಮಾಡಲು ಸ್ಥಳವಕಾಶ ಸಿಗದ ಹಿನ್ನೆಲೆಯಲ್ಲಿ ಏಕಾಏಕಿ ನನ್ನ ಕಾರಿಗೆ ಅಡ್ಡಹಾಕಿ ಹೊಡೆದಿದ್ದಾರೆ. ಡ್ಯಾಶ್ ಬೋರ್ಡ್ ಕ್ಯಾಮರಾ ಒಡೆದು ಹಾಕಲು ಯತ್ನಿಸಿದ್ದಾರೆ, ಕೆಲಸದ ಒತ್ತಡ ಇದ್ದಿದ್ದರಿಂದ ತಡವಾಗಿ ದೂರು ಕೊಡುತ್ತಿರುವುದಾಗಿ ಅರ್ಜುನ್ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ