Shivamogga: ಲಾರಿ-ಬೈಕುಗಳ ನಡುವೆ ಡಿಕ್ಕಿ; ಸ್ಥಳದಲ್ಲೇ ಮೂವರು ಯುವಕರ ಸಾವು..!
Shivamogga Crime News: ಲಾರಿ ಚಕ್ರ ಅಡಿಗೆ ಸಿಲುಕಿದ್ದ ಮೂವರು ಯುವಕರ ದೇಹಗಳು ಗುರುತು ಸಿಗದಷ್ಟು ಛಿದ್ರ ಛಿದ್ರವಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಶಿವಮೊಗ್ಗ: ಲಾರಿ ಮತ್ತು ಎರಡು ಬೈಕುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್–ಅರಹತೊಳಲು ಬಳಿ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ.
ಮೃತ ಯುವಕರನ್ನು ಜಂಬರಘಟ್ಟ ಗ್ರಾಮದ ನಿವಾಸಿಗಳಾದ ಶಶಾಂಕ್(17), ಯಶ್ವಂತ್(18) ಮತ್ತು ವಿಕಾಸ್ (17) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಭದ್ರಾವತಿ ತಾಲೂಕು ಅರದೊಟ್ಲು ಗ್ರಾಮದ ಯುವಕ ಗಗನ್ಗೆ ಗಂಭೀರ ಗಾಯವಾಗಿದ್ದು, ಆತನಿಗೆ ಮೆಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: Cauvery Dispute: ಒಣಗಿದ ತರಕಾರಿ ಹಿಡಿದು ಆಕ್ರೋಶ..! ನೀರು ಬಿಡದಂತೆ ಆಗ್ರಹ
ಘಟನೆ ಹೇಗಾಯ್ತು..?
ಶಿವಮೊಗ್ಗ ತಾಲೂಕಿನ ಅರಹತೊಳಲು ಗ್ರಾಮದ ಬಳಿ ಮೊದಲು ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬೈಕ್ಗಳಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆಯಲ್ಲಿ ಬಿದ್ದಿದ್ದಾರೆ. ಬಳಿಕ ಅವರ ಮೇಲೆ ಲಾರಿ ಹರಿದಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಲಾರಿ ಚಕ್ರ ಅಡಿಗೆ ಸಿಲುಕಿದ್ದ ಮೂವರು ಯುವಕರ ದೇಹಗಳು ಗುರುತು ಸಿಗದಷ್ಟು ಛಿದ್ರ ಛಿದ್ರವಾಗಿವೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಅಸಾಧ್ಯ, ಮರು ಪರಿಶೀಲಿಸಿ : ಸಿಎಂ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.