Telangana Crime News: ಪ್ರೀತಿಸಿ ಮದುವೆಯಾದ ಜೋಡಿಯೊಂದು ಎರಡೂ ಕಡೆಯ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ತಮ್ಮ ಜಮೀನಿನಲ್ಲಿಯೇ ಮರಕ್ಕೆ ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ನಗರಕರ್ನೂಲ್ ಜಿಲ್ಲೆಯಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

22 ವರ್ಷದ ಮಹೇಶ್ ಹಾಗೂ 20 ವರ್ಷದ ಭಾನುಮತಿ ಸಾವನ್ನಪ್ಪಿದವರು. ನಗರಕರ್ನೂಲ್ ಜಿಲ್ಲೆ ಬಲ್ಮುರು ಮಂಡಲ್ ವ್ಯಾಪ್ತಿಯ ಜಿನುಕುಂಟ ಗ್ರಾಮದವರಾದ ಈ ಜೋಡಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಎರಡೂ ಕಡೆಯ ಕುಟುಂಬಸ್ಥರಿಂದಲೂ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ಜಮ್ಮು–ಕಾಶ್ಮೀರದಲ್ಲಿ ಬಸ್ ಮೇಲೆ ಉಗ್ರರ ಗುಂಡಿನ ದಾಳಿ


ಕುಟುಂಬಸ್ಥರ ವಿರೋಧದ ನಡುವೆಯೂ ಈ ಜೋಡಿ ಇತ್ತೀಚೆಗಷ್ಟೇ ಮದುವೆ ಮಾಡಿಕೊಂಡಿತ್ತು. ನಂತರ ತಮ್ಮ ಗ್ರಾಮದಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಕುಟುಂಬಸ್ಥರ ಕಿರುಕುಳ ತಪ್ಪಿರಲಿಲ್ಲ. ಶನಿವಾರ ಸಂಜೆ ಮಹೇಶನ ತಂದೆ ಮತ್ತೆ ಗಲಾಟೆ ಮಾಡಿದ್ದರು.


ಇದರಿಂದ ಬೇಸತ್ತ ಈ ಜೋಡಿ ಭಾನುವಾರ ಬೆಳಗಿನ ಜಾವ ತಮ್ಮದೇ ಜಮೀನಿನಲ್ಲಿದ್ದ ಮರಕ್ಕೆ ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಅನಾವರಣಗೊಂಡ ಐತಿಹಾಸಿಕ ಕ್ಷಣ, 72 ಜನರೊಂದಿಗೆ ನಮೋ 3.0 ಸರ್ಕಾರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.