ಬೆಂಗಳೂರು: ಜನ ಯಾರಿಗೆ ಹೆದರುತ್ತಾರೋ ಇಲ್ಲವೋ ಗೊತ್ತಿಲ್ಲ. ನ್ಯಾಯಾಲಯಕ್ಕೆ ಪತರಗುಟ್ಟಿಹೋಗತ್ತಾರೆ.ಅಂಥದರಲ್ಲಿ ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿರೋ ಖತರ್ನಾಕ್ ಗ್ಯಾಂಗ್ ನ್ಯಾಯಾಂಗವನ್ನೇ ಯಾಮಾರಿಸೋ ಕೆಲಸವನ್ನು ಮಾಡಿದೆ.ಸಿಟಿ ಮಾರ್ಕೆಟ್ ಸರ್ಕಲ್ ನಲ್ಲಿ ಪೊಲೀಸರು ಏಪ್ರಿಲ್ 19 ರ ರಾತ್ರಿ ತಪಾಸಣೆ ಮಾಡುತ್ತಿದ್ದರು.ಈ ವೇಳೆ ಒರ್ವ ಪುರುಷ ಮತ್ತು ಮಹಿಳೆಯಿದ್ದ ಆಟೋ ತಪಾಸಣೆ ಮಾಡಿದ್ದಾರೆ.ಈ ವೇಳೆ ಆಟೋ ಚಾಲಕ ಇಳಿದು ಓಡಲು ಆರಂಭಿಸಿದ್ದಾನೆ.ಆಟೋಚಾಲಕನನ್ನು ಬೆನ್ನತ್ತಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆಟೋ ಪರಿಶೀಲನೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ರಾತ್ರಿ ಆಟೋ ಪರಿಶೀಲನೆ ನಡೆಸಿದಾಗ ಆಟೋದಲ್ಲಿ ಸರ್ಕಾರಿ ಸೀಲುಗಳು, ಆರ್.ಟಿ.ಸಿ ಮತ್ತು ಮ್ಯೂಟಿಯೇಷನ್ ಪಡೆದ ಕೆಲವು ದಾಖಲೆಗಳು ಲಭ್ಯವಾಗಿವೆ.ನಕಲಿ ಡಾಕ್ಯೂಮೆಂಟ್ ಕಂಡು ತಕ್ಷಣವೇ, ಪುಟ್ಟಸ್ವಾಮಿ ಮತ್ತು  ನಸ್ರಿನ್ ಸೇರಿ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಬಮೂಲ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ: ತನಿಖೆಗೆ ಸರ್ಕಾರದ ಆದೇಶ


ತಂತ್ರಜ್ಞಾನವನ್ನು ಬಳಸಿಕೊಂಡು ನ್ಯಾಯಾಲಯಕ್ಕೆ ಯಾಮಾರಿಸುತ್ತಿದ್ದರು.  PSI Recruitment Scam: ಇನ್ನೂ ಪತ್ತೆಯಾಗದೆ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ!


ಇವರ ಬಳಿ ಕಂಪನಿಗಳ ಎಕ್ಸಿಪೀರಿಯನ್ಸ್ ಲೇಟರ್ , ಸೀಲ್, ಆಧಾರ್ ಕಾರ್ಡ್ ಲಭ್ಯ


ನ್ಯಾಯಾಲಯಕ್ಕೆ ಮಾತ್ರವಲ್ಲದೇ ಇವರು ವಿವಿಧ ಕಂಪನಿಯ ನಕಲಿ ಎಕ್ಸ್ ಪೀರಿಯನ್ಸ್ ಲೆಟರ್,14 ಸೀಲು, 40ಕ್ಕೂ ಹೆಚ್ಚು ಸಾಲ್ವೆನ್ಸೀ ಸರ್ಟಿಫಿಕೇಟ್,100 ಕ್ಕೂ ಹೆಚ್ಚು ಪಹಣಿಗಳನ್ನು ಸಿಟಿ ಮಾರ್ಕೆಟ್ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.


ಇನ್ನೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರದಲ್ಲಿ ಹರಿ ಗ್ರಾಫಿಕ್ಸ್ ಎಂಬ ಡಿಟಿಪಿ ಸೆಂಟರ್ ಮೇಲೆ ದಾಳಿ ಮಾಡಿ ಮಾಲೀಕ ಮಂಜುನಾಥ್ ನನ್ನು ಬಂಧಿಸಿದ್ದಲ್ಲದೇ 1 ಕಂಪ್ಯೂಟರ್, ಪ್ರಿಂಟರ್ ಕಂ ಸ್ಕ್ಯಾನರ್,1 ಲ್ಯಾಮಿನೇಷನ್ ಮಷಿನ್ ವಶಕ್ಕೆ ಪಡೆಯಲಾಗಿದೆ.ಈಗ ಪುಟ್ಟಸ್ವಾಮಿ, ನಸ್ರಿನ್, ರಾಜಣ್ಣ, ಮಂಜುನಾಥ್, ಆಂಜಿನಪ್ಪ,ಕುಮಾರ್, ಚಂದ್ರಗೌಡ, ಸೊಣ್ಣೆಗೌಡ, ಟಿಎಂ ರಾಜಪ್ಪ ಸೇರಿ 9 ಆರೋಪಿಗಳನ್ನು ಪೊಲೀಸರು ಬಂಧಿಸುವುವಲ್ಲಿ ಯಶಸ್ವಿಯಾಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.