ಬೆಂಗಳೂರು: ಕಳೆದ ಮೂರು ದಿನಗಳ ಹಿಂದಷ್ಟೆ ಶಾಸಕರ ಸೋಗಿನಲ್ಲಿ ವ್ಯಕ್ತಿಯೋರ್ವ ಬಜೆಟ್ ಮಂಡನೆ ವೇಳೆ ಒಳನುಗ್ಗಿದ ಹಿನ್ನೆಲೆ ಕಗಿಟ್ಟುನಿಟ್ಟಾ ಪರಿಶೀಲನೆ ನಡೆಸಲಾಗಿತ್ತು.  ಸದ್ಯ ಅನಿತಾ ಎಂಬುವರನ್ನು‌ ಚಾಕು ತಂದ ಸಂಬಂಧ ವಶಕ್ಕೆ ಪಡೆಯಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಅಸ್ಟಿಸೆಂಟ್ ಜ್ಯೂನಿಯರ್ ಆಗಿ ಕೆಲಸ ಮಾಡುತ್ತಿದ್ದ ಅನಿತಾ ಜುಲೈ 7ರಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ: ಯತ್ನಾಳ್ ಆರೋಪ


ಈ ಹಿನ್ನೆಲೆ ಗುರುತಿನ ಚೀಟಿ ಇಲ್ಲದವರನ್ನು  ವಾಪಾಸ್ ಕಳುಹಿಸುತ್ತಿದ್ದರು. ಜೊತೆಗೆ ಬ್ಯಾಗ್ ಗಳ ಪರಿಶೀಲನೆ ನಡೆಸುವಾಗ ಅನಿತಾ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಕೂಡಲೇ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಹಿಳೆಯು ಸಂಬಂಧಿಕರೊಬ್ಬರು ಅನಾರೋಗ್ಯ ಹಿನ್ನೆಲೆ ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌.  


ಹಣ್ಣು ಕತ್ತರಿಸುವ ಚಾಕುವನ್ನ ಮರೆತು ಬ್ಯಾಗಿನಲ್ಲಿ ಇಟ್ಟುಕೊಂಡು ಬಂದಿರುವುದಾಗಿ ಹೇಳಿಕೆ ನೀಡಿದ್ದಾರೆ.‌ ಈ ಹಿನ್ನೆಲೆ ಪೊಲೀಸರು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಿ ಎಂದು ಮಹಿಳೆಯನ್ನ ಬಿಟ್ಟು ಕಳುಹಿಸಿದ್ದಾರೆ.


ಇದನ್ನೂ ಓದಿ-ಟೊಮ್ಯಾಟೊಗೆ ಬಂಗಾರದ ಬೆಲೆ: ಕಳ್ಳರಿಂದ ಟೊಮ್ಯಾಟೊ ತುಂಬಿದ ವಾಹನ ಹೈಜಾಕ್..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l