ಗುರುಗ್ರಾಮ: ಹರಿಯಾಣದ ಗುರುಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿಎಸ್‌ಪಿಯನ್ನೇ ಟ್ರಕ್ ಹರಿಸಿ ಹತ್ಯೆ ಮಾಡಲಾಗಿದೆ. ತೌರು ಉಪ ಪೊಲೀಸ್ ವರಿಷ್ಠಾಧಿಕಾರಿ(DSP) ಸುರೇಂದರ್ ಸಿಂಗ್ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿದ್ದ ಟ್ರಕ್ ಚಾಲಕನ ಮೇಲೆ ಹರಿಯಾಣ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಮಂಗಳವಾರ ನುಹ್ ಜಿಲ್ಲೆಯ ಪಚ್‌ಗಾಂವ್ ಗ್ರಾಮದ ಬಳಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾಗ ಓವರ್‌ಲೋಡ್ ಮಾಡಿದ ಟ್ರಕ್‍ಅನ್ನು ಸುರೇಂದರ್ ಸಿಂಗ್ ಮೇಲೆ ಹರಿಸಲಾಗಿತ್ತು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಬಳಿ ನಾಪತ್ತೆಯಾದ 18 ರಸ್ತೆ ಕಾರ್ಮಿಕರು: ಓರ್ವನ ಶವ ಪತ್ತೆ


ಗನ್‌ಮ್ಯಾನ್ & ಚಾಲಕ ಪ್ರಣಾಪಾಯದಿಂದ ಪಾರು


ಗಣಿಗಾರಿಕೆ ಮಾಫಿಯಾಗೆ ಡಿಎಸ್‍ಪಿ ಬಲಿಯಾಗಿದ್ದಾರೆ. ಹತ್ಯೆ ಮಾಡಿದ ಚಾಲಕ ಮತ್ತು ಟ್ರಕ್ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು. ಚಾಲಕನನ್ನು ಗುರುತಿಸಿದ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.


ಇದನ್ನೂ ಓದಿ: Viral video : ಮಂಡಿಯೂರಿ ಪ್ರೇಮ ನಿವೇದನೆ ಮಾಡಿಕೊಂಡ ಈ ತಾತನ ರೀತಿ ಹೇಗಿದೆ ನೋಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.