ಬೆಂಗಳೂರು: ಹೆಂಡತಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ಈ ಘಟನೆ ನಡೆದಿದೆ.  


COMMERCIAL BREAK
SCROLL TO CONTINUE READING

ಪತ್ನಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಣ್ಣಯ್ಯ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.


ಇದನ್ನೂ ಓದಿ: ಮತಾಂತರ ಅಲ್ಲ ಮನಸಾಂತರ: ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಡರಾತ್ರಿ ಪ್ರೊಟೆಸ್ಟ್


ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಉಮಾ ಎಂಬಾಕೆಯ ಜೊತೆ 5 ವರ್ಷಗಳ ಹಿಂದೆ ಮದುವೆಯಾಗಿದ್ದ. ಮದುವೆ ಬಳಿಕ ಗಂಡ-ಹೆಂಡತಿ ಜಗಳ ಮಾಡಿಕೊಂಡಿದ್ದರು. ಬಾರ್ ಒಂದರಲ್ಲಿ ಅಣ್ಣಯ್ಯ ಕ್ಯಾಶಿಯರ್ ಆಗಿದ್ದ. ಆದರೆ ಹೆಂಡತಿಯ ನಿರಂತರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ.  


‘ನಾನು ಎಷ್ಟು ದುಡಿದರೂ ನನ್ನ ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ, ನಾನು ಎಷ್ಟು ದುಡಿದರೂ ಆಕೆಗೆ ಸಾಕಾಗುತ್ತಿಲ್ಲ. ಹೀಗಾಗಿ ನನಗೆ ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಅಗಿದೆ. ನನ್ನ ಸಾವಿಗೆ ನಾನೇ ಕಾರಣ’ ಅಂತಾ ಅಣ್ಣಯ್ಯ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಇದನ್ನೂ ಓದಿ: ಮಗು ಬಿಟ್ಟು ವಿವಾಹಿತನ ಜೊತೆ ಶಿಕ್ಷಕಿ ಎಸ್ಕೇಪ್! ಲವ್ ಜಿಹಾದ್ ಅನುಮಾನ


ಹನುಮಂತ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಹನುಮಂತ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಖಾಕಿಪಡೆ ತನಿಖೆ ಕೈಗೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.