ಬೆಂಗಳೂರು: ಪ್ರೇಮಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದವಳನ್ನೇ ಕೊಲೆ ಮಾಡಿ ಪ್ರಿಯತಮ ಎಸ್ಕೇಪ್ ಆಗಿದ್ದಾನೆ.


COMMERCIAL BREAK
SCROLL TO CONTINUE READING

ನೇಪಾಳ ಮೂಲದ ಕೃಷ್ಣಕುಮಾರಿ(23) ಕೊಲೆಯಾದ ಯುವತಿಯಾಗಿದ್ದು, ನೇಪಾಳ ಮೂಲದ ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಕೃಷ್ಣಕುಮಾರಿ ಬ್ಯೂಟಿಷಿಯನ್ ಆಗಿದ್ದಳು. ಟಿಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್‍ನಲ್ಲಿ ಸಂತೋಷ್ ದಾಮಿ ಕೆಲಸ ಮಾಡುತ್ತಿದ್ದ.


ಇದನ್ನೂ ಓದಿ: ಬಿಜೆಪಿಯವರು ಪೊಳ್ಳು ಹಿಂದೂಗಳು, ನಾವೇ ನಿಜವಾದ ಹಿಂದೂಗಳು: ಯತೀಂದ್ರ ಸಿದ್ದರಾಮಯ್ಯ


ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಒಂದೇ ರೂಂ ಬಾಡಿಗೆ ಪಡೆದುಕೊಂಡಿದ್ದ ಈ ಪ್ರೇಮಿಗಳು ಲಿವಿಂಗ್ ರಿಲೇಷನ್‍ಶಿಪ್‍ನಲ್ಲಿದ್ದರು. ರಾಮೂರ್ತಿನಗರದ ಟಿಸಿ ಪಾಳ್ಯದಲ್ಲಿ ರೂಂ ಬಾಡಿಗೆ ಪಡೆದಿದ್ದ ಪ್ರೇಮಿಗಳ ನಡುವೆ ಇಂದು ಬೆಳಗ್ಗೆ ಜಗಳವಾಗಿತ್ತು.


ಇಬ್ಬರ ನಡುವಿನ ಜಗಳವು ತಾರಕ್ಕೇರಿದ್ದು, ಕೃಷ್ಣಕುಮಾರಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಸಂಬಂಧ ರಾಮೂರ್ತಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಸದ್ಯ 1 ವರ್ಷದ ಹಿಂದೆ ಆರೋಪಿ ಸಂತೋಷ್ ದಾಮಿ ಬೆಂಗಳೂರಿಗೆ ಬಂದಿದ್ದ ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರ ASI ಮನೆಗೆ ನುಗ್ಗಿ ಶೂಟೌಟ್ ಮಾಡಿ ದರೋಡೆ ಪ್ರಕರಣ : ಆರೋಪಿಗಳ ಬಂಧನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.