ಸರ್ಕಾರಿ ಕಚೇರಿಗೇ ಕನ್ನ ಹಾಕಿದ ಖದೀಮರು: ದಾಖಲೆಗಳು ಸೇರಿ ಕಂಪ್ಯೂಟರ್ ಕಳ್ಳತನ!

ಕಚೇರಿಯ ಕಬೋರ್ಡಿನಲ್ಲಿದ್ದ ಕೆಲ ಪ್ರಮುಖ ದಾಖಲೆಗಳು ಹಾಗೂ 3 ಕಂಪ್ಯೂಟರ್‌ಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಈ ಬಗ್ಗೆ ಎಂಜಿನಿಯರ್ ಅನಂತ್ ಎಂಬುವವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Written by - VISHWANATH HARIHARA | Edited by - Puttaraj K Alur | Last Updated : Dec 17, 2022, 02:02 PM IST
  • ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿಯೇ ದರೋಡೆ
  • ಸರ್ಕಾರಿ ದಾಖಲೆಗಳು ಮತ್ತು ಕಂಪ್ಯೂಟರ್‍ಗಳನ್ನೇ ಹೊತ್ತೊಯ್ದ ಖದೀಮರು
  • 2ನೇ ಶನಿವಾರ ಮತ್ತು ಭಾನುವಾರದ ರಜೆ ವೇಳೆ ಕೈಚಳಕ ತೋರಿದ ಕಳ್ಳರು
ಸರ್ಕಾರಿ ಕಚೇರಿಗೇ ಕನ್ನ ಹಾಕಿದ ಖದೀಮರು: ದಾಖಲೆಗಳು ಸೇರಿ ಕಂಪ್ಯೂಟರ್ ಕಳ್ಳತನ! title=
ಸರ್ಕಾರಿ ಕಚೇರಿಗೇ ಕನ್ನ!

ಬೆಂಗಳೂರು: ಸರ್ಕಾರಿ ಕಚೇರಿಯಲ್ಲೇ ಖತರ್ನಾಕ್ ಖದೀಮರು ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ.

ವಿಧಾನಸೌಧದಿಂದ ಕೂಗಳತೆ ದೂರದಲ್ಲಿರುವ ಸರ್. ಎಂ.ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಕಚೇರಿಯಲ್ಲಿ ಕೆಲ ದಾಖಲೆಗಳು ಹಾಗೂ ಕಂಪ್ಯೂಟರ್‌ಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಇನ್ಸ್ಪೆಕ್ಟರ್ ಸಾವಿಗೆ ಡಿಸಿಪಿ ಪರೋಕ್ಷ ಕಾರಣ? ಡಿಸಿಪಿ ವಿರುದ್ಧ ಅಸಮಾಧಾನ ಹೊರಹಾಕಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಸಿಬ್ಬಂದಿ

ಇತ್ತೀಚೆಗೆ ಲೋಕೋಪಯೋಗಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಕಚೇರಿಯಲ್ಲಿ ‌ಹೊಸ ಕಂಪ್ಯೂಟರ್‌ಗಳನ್ನು ಅಳವಡಿಸಲಾಗಿತ್ತು. ಇದನ್ನು ಗಮನಿಸಿದ್ದ ಕಳ್ಳರು ಈ ತಿಂಗಳ 2ನೇ ಶನಿವಾರ ಮತ್ತು ಭಾನುವಾರ ರಜೆಯಂದು ಕಚೇರಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಒಳನುಗ್ಗಿ ಕಳ್ಳತನ ಮಾಡಿದ್ದಾರೆ.  

ಕಚೇರಿಯ ಕಬೋರ್ಡಿನಲ್ಲಿದ್ದ ಕೆಲ ಪ್ರಮುಖ ದಾಖಲೆಗಳು ಹಾಗೂ 3 ಕಂಪ್ಯೂಟರ್‌ಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಈ ಬಗ್ಗೆ ಎಂಜಿನಿಯರ್ ಅನಂತ್ ಎಂಬುವವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿಕುಕ್ಕರ್ ಬಾಂಬ್ ಸ್ಫೋಟ : ಶಾರೀಕ್‌ಗೆ ಬೆಂಗಳೂರಿನ ವಿಕ್ಟೋರಿಯಾದಲ್ಲಿ ಚಿಕಿತ್ಸೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News