ನವದೆಹಲಿ: ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಂದಿದ್ದಾಳೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಕೊಡಲಿಯಿಂದ ಪತಿಯನ್ನು ಕೊಂದು ಆತನ ದೇಹವನ್ನು 5 ತುಂಡುಗಳಾಗಿ ಕತ್ತರಿಸಿ ನಾಲೆಗೆ ಎಸೆದಿರುವುದಾಗಿ ಮಹಿಳೆ ಒಪ್ಪಿಕೊಂಡಿದ್ದಾಳೆ. ಪತಿಯನ್ನು ಕತ್ತರಿಸುವ ಮೊದಲು ಮಹಿಳೆ ಆತನನ್ನು ಮಂಚಕ್ಕೆ ಕಟ್ಟಿ ಹಾಕಿದ್ದಳಂತೆ. ಮೃತರನ್ನು ಗಜ್ರೌಲಾ ಪ್ರದೇಶದ ಶಿವನಗರ ನಿವಾಸಿ 55 ವರ್ಷದ ರಾಮ್ ಪಾಲ್ ಎಂದು ಗುರುತಿಸಲಾಗಿದೆ.


COMMERCIAL BREAK
SCROLL TO CONTINUE READING

ಪತಿ ಕೊಲೆಗೆ ಕಾರಣವೇನು?


ಮಾಹಿತಿಯ ಪ್ರಕಾರ, ರಾಮ್ ಪಾಲ್ ಅವರ ಪತ್ನಿ ದುಲಾರೋ ದೇವಿ ತನ್ನ ಪತಿಯ ಸ್ನೇಹಿತನೊಂದಿಗೆ ಓಡಿಹೋಗಿದ್ದರಂತೆ. ನಂತರ 1 ತಿಂಗಳ ಹಿಂದೆ ಗ್ರಾಮಕ್ಕೆ ಹಿಂತಿರುಗಿ ತನ್ನ ಪತಿ ನಾಪತ್ತೆಯಾಗಿರುವ ಬಗ್ಗೆ ಮಗನಿಗೆ ತಿಳಿಸಿದ್ದಳು. ನಂತರ ರಾಮ್ ಪಾಲ್ ಅವರ ಮಗ ಸೋನ್ ಪಾಲ್ ಪೊಲೀಸ್ ಠಾಣೆಯಲ್ಲಿ ತಮ್ಮ ತಂದೆ ಕಾಣೆಯಾದ ಬಗ್ಗೆ ದೂರು ನೀಡಿದ್ದಾನೆ.


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ: ರಾಡ್‍ನಿಂದ ಹೊಡೆದು ಬಾಲಕಿಯ ಹತ್ಯೆ..!


ತಪ್ಪೊಪ್ಪಿಕೊಂಡ ಮಹಿಳೆ!


ನಾಪತ್ತೆ ದೂರು ಸ್ವಿಕರಿಸಿದ ಪೊಲೀಸರು ಅನುಮಾನದ ಆಧಾರದ ಮೇಲೆ, ದುಲಾರೋ ದೇವಿಯನ್ನು ವಶಕ್ಕೆ ಪಡೆದು ಪತಿಯ ಬಗ್ಗೆ ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ವಿಚಾರಣೆ ವೇಳೆ ರಾಮ್ ಪಾಲ್ ಅವರ ಪತ್ನಿ ತಾನು ಮಾಡಿರುವ ಕೊಲೆ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ. ರಾತ್ರಿ ವೇಳೆ ಮಲಗಿದ್ದಾಗ ರಾಮ್ ಪಾಲ್ ನನ್ನು ಕೊಂದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಆತನನ್ನು 5 ತುಂಡುಗಳಾಗಿ ಕತ್ತರಿಸಿದ ಆಕೆ ದೇಹದ ಭಾಗಗಳನ್ನು ಸಮೀಪದ ಕಾಲುವೆಗೆ ಎಸೆದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.


ಇದನ್ನೂ ಓದಿ: ಹಸಿರು ಬಣ್ಣದ ರೋಮಗಳಿರುವ ಹಾವಿನ ವಿಡಿಯೋ ವೈರಲ್‌


ರಕ್ತಸಿಕ್ತ ಬಟ್ಟೆ ವಶಪಡಿಸಿಕೊಂಡ ಪೊಲೀಸರು!


ಈ ಭೀಕರ ಘಟನೆಯ ಕುರಿತು ಹೇಳಿಕೆ ನೀಡಿರುವ ಪೊಲೀಸರು, ಕೊಲೆಯಾಗಿರುವ ರಾಮ್ ಪಾಲ್ ಅವರ ದೇಹದ ಭಾಗಗಳನ್ನು ಹೊರತೆಗೆಯಲು ಮುಳುಗು ತಜ್ಞರ ಸಹಾಯವನ್ನು ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕಾಲುವೆಯಲ್ಲಿ ಮೃತ ವ್ಯಕ್ತಿಯ ರಕ್ತಸಿಕ್ತ ಬಟ್ಟೆ ಹಾಗೂ ಹಾಸಿಗೆ ಪತ್ತೆಯಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.