ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ತೇಜೋವಧೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.


COMMERCIAL BREAK
SCROLL TO CONTINUE READING

ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ‌ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, 505 ಬೆದರಿಕೆಯಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಇದನ್ನೂ ಓದಿ- ಕೋಲಾರದಲ್ಲಿ ಬೆಳಕಿಗೆ ಬಂದ ಮರ್ಯಾದೆ ಹತ್ಯೆ


ಅವಹೇಳಕಾರಿ ಪೋಸ್ಟ್ ಹಾಗೂ ವಿಡಿಯೋ ಬಿತ್ತರಿಸುವ ಮೂಲಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷವನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ, ಹಿಂದೂ ವಿರೋಧಿ, ಕಾಂಗ್ರೆಸ್ ಉಗ್ರವಾದ ಬೆಂಬಲಿಸುತ್ತದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶ ಒಡೆಯುತ್ತಾರೆ ಎಂದು  ಬಿಂಬಿಸಲಾಗಿದೆ. ಅಲ್ಲದೇ ಆಂತಕವಾದಿಗಳಿಗಿಂತಲೂ ರಾಹುಲ್ ಗಾಂಧಿ ಅಪಾಯಕಾರಿ ಎಂದು ಟೀಕಿಸಲಾಗಿತ್ತು. ಹೀಗಾಗಿ ವಿವಿಧ ವರ್ಗಗಳ ಕೋಮುಭಾವನಕ್ಕೆ ಧಕ್ಕೆ, ಸಮಾಜದ‌ ಅಶಾಂತಿ ಸೃಷ್ಟಿಯಾಗುವ ರೀತಿಯಲ್ಲಿ ಐಟಿ ಸೆಲ್‌ ಉಸ್ತುವಾರಿ ಅಮಿತ್ ಮಾಳವಿಯ ಪೋಸ್ಟ್ ಮಾಡಿರುವುದು ಖಂಡನಾರ್ಹ. ಅವರ ವಿರುದ್ಧ‌‌ ಕ್ರಮ ಕೈಗೊಳ್ಳಬೇಕೆಂದು ರಮೇಶ್ ಬಾಬು ದೂರು ನೀಡಿದ ಮೇರೆಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ- ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಮೊಬೈಲ್, ಲ್ಯಾಪ್‌ಟಾಪ್ ಕಳ್ಳರು ಅಂದರ್


ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದ ನಿಯೋಗ ರಾಷ್ಟ್ರೀಯ ಕಾಂಗ್ರೆಸ್ ನಾಯಕರ ವಿರುದ್ಧ ತೇಜೊವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.