ಬೆಂಗಳೂರು: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ ಕರೆತಂದು ಪಟ್ಟಣಗೆರೆ ಶೆಡ್ ನಲ್ಲಿ ಕೊಂದು ಮೋರಿ ಬಳಿ ಎಸೆದಿದ್ದ ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನವನ್ನು  ವಿಸ್ತರಿಸಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗನ್ನು 24ನೇ ಎಸಿಎಂಎಂ ಕೋರ್ಟ್ ಮುಂದೆ ವಿಡಿಯೋ ಕಾನ್ಫರನ್ಸ್  ಮೂಲಕ ಅಧಿಕಾರಿಗಳು ಹಾಜರುಪಡಿಸಿದ್ದರು. 


COMMERCIAL BREAK
SCROLL TO CONTINUE READING

ಆರೋಪಿಗಳ ಪೈಕಿ ದರ್ಶನ್ (Darshan) ಸೇರಿ 13 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ.‌ ಇನ್ನೂ ನಾಲ್ವರು ಆರೋಪಿಗಳು ತುಮಕೂರು ಜೈಲಲ್ಲಿ ಇದ್ದಾರೆ. ಇಂದು ನ್ಯಾಯಾಂಗ ಬಂಧನ ಮುಕ್ತಾಯವಾದ ಹಿನ್ನೆಲೆ ಬೆಂಗಳೂರು ಮತ್ತು ತುಮಕೂರು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. 


ಇದನ್ನೂ ಓದಿ- 2011ರಲ್ಲಿ ಜೈಲಿನಿಂದ ಹೊರಬರುವಾಗ ದರ್ಶನ್‌ ಹೇಳಿದ್ದ ʼಆʼ ಮಾತು ಈಗ ನಿಜವಾಯ್ತು! ಅಷ್ಟಕ್ಕೂ ಏನದು?


ಸರ್ಕಾರದ ಪರ ವಾದ ಮಂಡಿಸಿದ ವಕೀಲರು ತನಿಖೆ ನಡೆಯುತ್ತಿದೆ. ಈ ಹಿನ್ನೆಲೆ ಆರೋಪಿಗಳ ನ್ಯಾಯಾಂಗ ಬಂಧನ (Judicial Custody) ಮುಂದುವರೆಸಬೇಕು ಎಂದು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ 24 ಎಸಿಎಂಎಂ ನ್ಯಾಯಾಲಯವು ಎಲ್ಲಾ ಆರೋಪಿಗಳಿಗೆ ಆಗಸ್ಟ್ 28 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ.  


ಇದನ್ನೂ ಓದಿ- ಒಂಟಿ ಹೆಣ್ಣು ಕಂಡ್ರೆ ಹುಚ್ಚನಂತೆ ವರ್ತಿಸುತ್ತಾನೆ..! ಖ್ಯಾತ ನಟನ ಮೇಲೆ ಗಾಯಕಿಯ ಶಾಕಿಂಗ್‌ ಹೇಳಿಕೆ


ಇನ್ನೂ ನಟ ದರ್ಶನ್ (Actor Darshan) ಅಭಿಮಾನಿಗಳು ನಮ್ಮ ಬಾಸ್ ಇವತ್ತು ರಿಲೀಸ್ ಆಗುತ್ತಾರೆ ಎಂಬ ಚರ್ಚೆಯನ್ನು ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ್ದರು. ಆದರೆ ಡಿ ಗ್ಯಾಂಗ್ ಗೆ ಮತ್ತೆ ಜೈಲೇ ಗತಿಯಾಗಿರುವುದರಿಂದ ದರ್ಶನ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.