ಗಂಡ ಹೆಂಡತಿ ಜಗಳ:‌ ಎಣ್ಣೆ ಏಟಲ್ಲಿ ಅತ್ತೆಯನ್ನು ಕೊಂದ ಪಾಪಿ ಅಳಿಯ

ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ದಾಸನಾಗಿದ್ದ. ಆಗಾಗ ಮನೆಯಲ್ಲಿ ಗಲಾಟೆ ಆಗುತಿತ್ತು. ಗಂಡನ ಕಾಟ ತಾಳಲಾರದೇ ಮೂರು ವರ್ಷಗಳಿಂದ ಭವ್ಯಶ್ರೀ ಸಂಜಯನಗರದ ತಾಯಿ ಮನೆಗೆ ಬಂದಿದ್ದಳು. ಈ ಮಧ್ಯೆ ವಿಚ್ಛೇದನಕ್ಕಾಗಿ ತಯಾರಿ ನಡೆಯುತಿತ್ತು.‌ 

Written by - VISHWANATH HARIHARA | Edited by - Yashaswini V | Last Updated : Jul 19, 2022, 12:59 PM IST
  • ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ದಾಸನಾಗಿದ್ದ.
  • ಆಗಾಗ ಮನೆಯಲ್ಲಿ ಗಲಾಟೆ ಆಗುತಿತ್ತು.
  • ಗಂಡನ ಕಾಟ ತಾಳಲಾರದೇ ಮೂರು ವರ್ಷಗಳಿಂದ ಭವ್ಯಶ್ರೀ ಸಂಜಯನಗರದ ತಾಯಿ ಮನೆಗೆ ಬಂದಿದ್ದಳು.
ಗಂಡ ಹೆಂಡತಿ ಜಗಳ:‌ ಎಣ್ಣೆ ಏಟಲ್ಲಿ ಅತ್ತೆಯನ್ನು ಕೊಂದ ಪಾಪಿ ಅಳಿಯ  title=
Crime News

ಬೆಂಗಳೂರು: ಗಂಡ- ಹೆಂಡತಿ ಜಗಳದಲ್ಲಿ ಅತ್ತೆ ಬಲಿಯಾಗಿದ್ದಾರೆ. ಕುಡಿದ ಅಮಲಿನಲ್ಲಿ ಕನ್ಯಾದಾನ ಮಾಡಿದ್ದ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಅಳಿಯನನ್ನ ಎಚ್ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಾರತ್ ಹಳ್ಳಿಯ ಸಂಜಯನಗರ ನಿವಾಸಿ ಸೌಭಾಗ್ಯ ಕೊಲೆಯಾದ ದುರ್ದೈವಿ ನಾಗರಾಜ್‌ ಬಂಧಿತ ಆರೋಪಿ. ಜುಲೈ 13ರಂದು ಕೊಲೆ‌ ಕೃತ್ಯ ನಡೆದಿತ್ತು.‌ಆರೋಪಿ‌ ನಾಗರಾಜ್ ಕಳೆದ‌  6 ವರ್ಷದ ಹಿಂದೆ ಭವ್ಯಶ್ರೀ ಎಂಬಾಕೆಯನ್ನು ವಿವಾಹವಾಗಿದ್ದ. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ 5 ವರ್ಷದ ಮಗುವಿದೆ. 

ಇದನ್ನೂ ಓದಿ-  ಕಳ್ಳತನದ ಹಾದಿ ಹಿಡಿದ ಗುರು: ತೊಗರಿ ಬೇಳೆ ಕದ್ದು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ

ವೃತ್ತಿಯಲ್ಲಿ ಡ್ರೈವಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ ಕುಡಿತದ ಚಟಕ್ಕೆ ದಾಸನಾಗಿದ್ದ. ಆಗಾಗ ಮನೆಯಲ್ಲಿ ಗಲಾಟೆ ಆಗುತಿತ್ತು. ಗಂಡನ ಕಾಟ ತಾಳಲಾರದೇ ಮೂರು ವರ್ಷಗಳಿಂದ ಭವ್ಯಶ್ರೀ ಸಂಜಯನಗರದ ತಾಯಿ ಮನೆಗೆ ಬಂದಿದ್ದಳು. ಈ ಮಧ್ಯೆ ವಿಚ್ಛೇದನಕ್ಕಾಗಿ ತಯಾರಿ ನಡೆಯುತಿತ್ತು.‌ 

ಕುಡಿದ ಅಮಲಿನಲ್ಲಿದ್ದ ನಾಗರಾಜನಿಗೆ ಪತ್ನಿ ಮತ್ತೆ ಬೇಕು ಅನಿಸಿದೆ. ಜುಲೈ 12ರಂದು ಅತ್ತೆ ಮನೆ ಬಳಿ ಬಂದು ಗಲಾಟೆ ಮಾಡಿದ್ದ. ಹೆಂಡತಿಯನ್ನು ತನ್ನೊಟ್ಟಿಗೆ ಕಳಿಸಿಕೊಡುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಅತ್ತೆ ಸೌಭಾಗ್ಯ ಬುದ್ಧಿ ಹೇಳಿ ಕಳಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ನಾಗರಾಜ್ ಜುಲೈ 13 ರಂದು ಕಂಠಪೂರ್ತಿ ಕುಡಿದು ಸಂಜೆ ಅತ್ತೆ ಸೊಪ್ಪು ವ್ಯಾಪಾರ ಮಾಡುತ್ತಿದ್ದ ಜಾಗಕ್ಕೆ ಬಂದು ಏಕಾಏಕಿ ಸುತ್ತಿಗೆಯಿಂದ ಐದಾರು ಬಾರಿ ಹೊಡೆದಿದ್ದಾನೆ. ಹೀಗಾಗಿ ಸ್ಥಳದಲ್ಲೇ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಸೌಭಾಗ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. 

ಇದನ್ನೂ ಓದಿ-  Yadgir : ಬುದ್ದಿ ಮಾತು ಹೇಳಲು ಬಂದ ನಾಲ್ವರಿಗೆ ಬೆಂಕಿ ಹಚ್ಚಿದ ಗಂಡ!

ಸದ್ಯ ಪ್ರಕರಣ  ದಾಖಲಿಸಿಕೊಂಡು ಆರೋಪಿ ನಾಗರಾಜ್ ನನ್ನ ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ 'ನಾನು ನನ್ನ ಅತ್ತೆಯನ್ನು ಕೊಲ್ಲುವ ಉದ್ದೇಶ ಇರಲಿಲ್ಲ. ನನ್ನ ಹೆಂಡತಿ ಕೊಲ್ಲುವುದಕ್ಕೆ ಪ್ಲಾನ್ ಮಾಡಿಕೊಂಡಿದ್ದೆ. ಆದರೆ ಕುಡಿದ ಮತ್ತಿನಲ್ಲಿ ಯಾರು ಅನ್ನೋದೆ ಗೊತ್ತಾಗಿಲ್ಲ.ಹೆಂಡತಿ ಅಂತಾ ಅತ್ತೆಗೆ ಹೊಡೆದುಬಿಟ್ಟೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News