ಚಾಮರಾಜನಗರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳ ಶವ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಜಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಮೃತ ದುರ್ದೈವಿಗಳನ್ನು ಮೇಘ (24), ಪುನ್ವಿತಾ (06), ಮನ್ವಿತಾ( 03) ಎಂದು ಗುರುತಿಸಲಾಗಿದ್ದು ಆಗಾಗ್ಗೆ ನಡೆಯುತ್ತಿದ್ದ ಕೌಟಂಬಿಕ ಕಲಹವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.


ಇದನ್ನೂ ಓದಿ- ಮಾನಸಿಕ ಕಿರುಕುಳಕ್ಕೆ ಮನನೊಂದು ಮೈಸೂರು ವಿವಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ


ಪತಿ ಹಾಗೂ ಅತ್ತೆ-ಮಾವ ಕೊಂದಿರುವ ಆರೋಪ: 
ಮೇಘಾ ಪತಿ ಅಭಿ ಉರ್ಫ್ ಧನಂಜಯ, ಈತನ  ತಾಯಿ ನಿರ್ಮಲಮ್ಮ, ತಂದೆ ಮಲ್ಲಿಕಾರ್ಜುನ ಮತ್ತು ತಮ್ಮ ಪುಟ್ಟು ಜೊತೆಗೆ ಸೇರಿ ತನ್ನ ಹೆಂಡತಿ ಮೇಘ ಮತ್ತು ಇಬ್ಬರೂ ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಳ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿ- OMG: 45ಕ್ಕೂ ಹೆಚ್ಚು ಮಹಿಳೆಯರ ರೇಪ್ ಮಾಡಿದ್ದ ಕಾಮುಕ ಪ್ರಿನ್ಸಿಪಾಲ್ ಬಂಧನ!


ಇಂದು ಬೆಳಿಗ್ಗೆಯಿಂದಲೂ ಮನೆಯಲ್ಲಿ ಗಲಾಟೆ ನಡೆದಿತ್ತು ಗಂಡ ಹಾಗೂ ಆತನ ಮನೆಯವರು ನೇಣು ಬಿಗಿದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ, ಮೃತ ಮೇಘ ಅವರ ಪತಿ ಅಭಿ ಹಾಗೂ ಅತ್ತೆ-ಮಾವರನ್ನು ಪೊಲೀಸರು ಬಂಧಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.