FIR Against BJP leader: ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಔರಂಗಾಬಾದ್ ನಗರವನ್ನು ಸಂಭಾಜಿ ನಗರ ಎಂದು ಮರುನಾಮಕರಣ ಮಾಡಿದ್ದೇಕೆ ಗೊತ್ತೇ?


ಬಿಜೆಪಿ ಮುಖಂಡ KN ಚಕ್ರಪಾಣಿ ವಿರುದ್ಧ FIR ದಾಖಲು ಮಾಡಲಾಗಿದೆ. ಶ್ರೀಧರ್ ಮೂರ್ತಿ ಎಂಬುವರಿಂದ ದೂರು ದಾಖಲಾಗಿದ್ದು, ಚಕ್ರಪಾಣಿ ಮನೆ ಎದುರು ವಾಸಿಸುವ ಶ್ರೀಧರ್ ಮೂರ್ತಿ ಈ ದೂರು ದಾಖಲಿಸಿದ್ದಾರೆ. ಕೊಡಿಗೆಹಳ್ಳಿ‌ ವಿರೂಪಾಕ್ಷಪುರದಲ್ಲಿರುವ ಶ್ರೀಧರ್ ಅಪಾರ್ಟ್ಮೆಂಟ್ ಗೇಟ್ ರಿಪೇರಿ ಮಾಡಿಸ್ತಿದ್ದ ಶ್ರೀಧರ್ ಮೂರ್ತಿ ಅವರಿಗೆ 12 ಜನರ ಗ್ಯಾಂಗ್ ನೊಂದಿಗೆ ಎಂಟ್ರಿಯಾದ ಚಕ್ರಪಾಣಿ, ಇಲ್ಲಿ ಕೆಲಸ ಮಾಡುವಂತಿಲ್ಲ ನಿಲ್ಲಿಸ ಬೇಕೆಂದು ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.
 
ಆವಾಜ್ ಹಾಕಿ ಶ್ರೀಧರ್ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರಾಜು ಸೇರಿ 12 ಜನರನ್ನ ಕರೆತಂದಿದ್ದ ಚಕ್ರಪಾಣಿ, "ನಮ್ಮ ಮನೆ ಮುಂದೆ ನೀನು ಇರಬಾರದು. ಇದ್ದರೆ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಅಂತ ಆರೋಪಿಸಲಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ


ಕುಡಿದು ಬಂದಿದ್ದೀಯಾ ನಾಳೆ ಮಾತಾಡೋಣ ಅಂದ್ರೂ ಚಕ್ರಪಾಣಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಸೆಕ್ಷನ್ 143, 448, 323, 504, 506 ಅಡಿ ಕೇಸ್ ದಾಖಲಿಸಿದ್ದು, ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.