ವಿಜಯಪುರ: ರಾಜ್ಯದಲ್ಲಿ ಎಲ್ಲೆಡೆ ಚುನಾವಣೆ ಅಬ್ಬರ ಜೋರು ಇರುವುದರಿಂದ ಎಲ್ಲರು ಮತಯಾಚನೆಯಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಹಾಡುಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿ ಹತ್ಯೆಗೈದಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಚಾಂದಪುರ ಚಾಂದಪುರ ಕಾಲೋನಿಯಲ್ಲಿ  ಈ ಭೀಕರ ಘಟನೆ  ನಡೆದಿದೆ. ವಾರ್ಡ್ ನಂ.19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಪತಿ ಹೈದರ್ ಅಲಿಯನ್ನು ದುಷ್ಕರ್ಮಿಗಳು   ಫೈರಿಂಗ್ ಮಾಡಿದ್ದಾರೆ. ಮೃತ ಹೈದರ್ ನದಾಫ್ ರೌಡಿ ಶೀಟರ್ ಆಗಿದ್ದ ಎನ್ನಲಾಗುತ್ತಿದೆ.


ಇದನ್ನೂ ಓದಿ: Mallikarjuna Kharge: ಮಲ್ಲಿಕಾರ್ಜುನ ಖರ್ಗೆ ಹತ್ಯೆ ಕುರಿತು ಆಡಿಯೋ: ಸತ್ಯಾಸತ್ಯತೆಯ ಬಗ್ಗೆ ತನಿಖೆ - ಬೊಮ್ಮಾಯಿ


ವಿಜಯಪುರ ನಗರದಲ್ಲಿ ಚಾಂದಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತುತ್ತಿದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ್ದಾರೆ.  ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿಲು ಮುಂದಾಗಿದ್ದಾರೆ ಆ ವೇಳೆ ಬೆನ್ನಟ್ಟಿದ್ದ ದುಷ್ಕರ್ಮಿಗಳು ಒಂದೇ ಸಮಾನೆ ನಾಲ್ಕು ಬಾರಿ  ಗುಂಡು ಹಾರಿಸಿದ್ದಾರೆ ಇದರ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.


ಇದನ್ನೂ ಓದಿ: Special Gift To Modi : ಮೋದಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾದ ಹಾವೇರಿ ಬಿಜೆಪಿ ನಾಯಕರು


ಮೊನ್ನೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ಸದ್ಯ ಮೃತ ಹೈದರ್ ನದಾಫ್ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು. 


ಪ್ರಕರಣ ಹಿನ್ನಲೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ  ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.