ಭೀಕರ ಅಪಘಾತ: ಬೆಳಗಾವಿ ಮೂಲದ ಒಂದೇ ಕುಟುಂಬದ ಐವರ ದುರ್ಮರಣ!
Road Accident: ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಕ್ರೂಸರ್ ವಾಹನದಲ್ಲಿ ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು.
ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ
ಶುಕ್ರವಾರ ಬೆಳಗಿನ ಜಾವ 3.30ರ ವೇಳೆಗೆ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕ್ರೂಸರ್ನಲ್ಲಿದ್ದ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ದುರಂತ ಅಂತ್ಯ ಕಂಡಿದ್ದಾರೆ.
ಇದನ್ನೂ ಓದಿ: ಅಪಘಾತ ಮಾಹಿತಿ ನೀಡುವ ರಕ್ಷಾ ಕ್ಯೂಆರ್ ಕೋಡ್
ಘಟನೆಯಲ್ಲಿ ಹನುಮಂತ ಆಜೂರ (42), ಶೋಭಾ ಆಜೂರ (36), ಮಾನಂದಾ ಆಜೂರ (32), ಚಾಲಕ ಹನುಮಂತ ಜಾಧವ (32) ಮತ್ತು ಅಂಬಿಕಾ ಆಜೂರ (14) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 11 ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜವರಾಯನ ಅಟ್ಟಹಾಸ!
ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಕ್ರೂಸರ್ ವಾಹನದಲ್ಲಿ ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದರು. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಇಂದು ಮನೆಗೆ ವಾಪಸ್ ಆಗುತ್ತಿದ್ದರು. ಆದರೆ ಜವರಾಯ ಅಟ್ಟಹಾಸ ಮೆರೆದಿದ್ದು, ದೇವರ ದರ್ಶನ ಪಡೆದು ವಾಪಸ್ ಮನೆಗೆ ಬರುತ್ತಿದ್ದವರ ಪೈಕಿ ಐವರು ಮಸಣ ಸೇರಿದ್ದಾರೆ. ಒಂದೇ ಕುಟುಂಬದ ಐವರು ಸಾವನ್ನಪ್ಪಿರುವುದು ಬಡಚಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಇದನ್ನೂ ಓದಿ: ಸರ್.ಎಂ. ವಿಶ್ವೇಶ್ವರಯ್ಯರಿಂದಲೇ ಬೆಂಗಳೂರಿಗೆ ಕಾವೇರಿ ನೀರು ಬಂದಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.