ಚಾಮರಾಜನಗರ: ಪ್ರತ್ಯೇಕ ಪ್ರಕರಣಗಳಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವಿನ ಮೆದೆಗಳು ಅಗ್ನಿ ಅವಘಡ ಉಂಟಾಗಿ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಗುಂಡ್ಲುಪೇಟೆ ತಾಲೂಕಿನ ಕರಕಲಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ‌ ಮೇವಿಗಾಗಿ 3 ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.


ಇದನ್ನೂ ಓದಿ- ಹುಬ್ಬಳ್ಳಿ ಸಿಸಿಬಿ ಪೋಲೀಸರ ಭರ್ಜರಿ ಬೇಟೆ: ಎಂಡಿಎಂಎ ಡ್ರಗ್ಸ್ ಮಾರಾಟ ಜಾಲದ ಮೂವರ ಬಂಧನ


ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳೀಯರು ಬೆಂಕಿಯನ್ನು ನಂದಿಸಿ ಪಕ್ಕದಲ್ಲೇ ಇದ್ದ ದನದ ಕೊಟ್ಟಿಗೆಗೆ ಬೆಂಕಿ ಹರಡದಂತೆ ತಡೆದಿದ್ದಾರೆ. ಗುಂಡ್ಲುಪೇಟೆಯ ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 


ಇದನ್ನೂ ಓದಿ- ಪಾರ್ಕಿಂಗ್ ವಿಚಾರಕ್ಕೆ ದಂಪತಿ ಮೇಲೆ ಹಲ್ಲೆ : ಅಟ್ಟಹಾಸ ಮೆರೆದ ಅವಿವೇಕಿಗಳು ಅಂದರ್


ಇನ್ನು, ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ಪ್ರಕಾಶ್ ಎಂಬವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಮೇವಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಎರಡು ಹುಲ್ಲಿನ ಮೆದೆಗಳು ಭಸ್ಮವಾಗಿದೆ. 


ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ  ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.