ಬೆಂಗಳೂರು : ಚಿತ್ರೀಕರಿಸಿದ್ದ ಸಿನಿಮಾದ ದೃಶ್ಯಗಳ ಹಾರ್ಡ್ ಡಿಸ್ಕ್ ನೀಡದೇ ನಿರ್ಮಾಪಕರಿಗೆ ವಂಚಿಸಿ ಜೀವಬೆದರಿಕೆ ಹಾಕಿದ ಆರೋಪದಡಿ ಛಾಯಾಗ್ರಾಹಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಮುದ್ರಂ ಸಿನಿಮಾದ ನಿರ್ಮಾಪಕಿ ರಾಜಲಕ್ಷ್ಮಿ ನೀಡಿರುವ ದೂರಿನನ್ವಯ ಛಾಯಾಗ್ರಾಹಕ ರಿಷಿಕೇಷ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಅನಿತಾ ಭಟ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಮುದ್ರಂ ಸಿನಿಮಾವನ್ನ ರಾಜಲಕ್ಷ್ಮಿ ಸಿನಿ ಕ್ರಿಯೇಷನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡಲಾಗುತ್ತಿತ್ತು. ಚಿತ್ರಕ್ಕೆ ರಿಶಿಕೇಷ್ ಛಾಯಾಗ್ರಾಹಕನಾಗಿದ್ದು, ರಾಜಲಕ್ಷ್ಮಿ ಎಂಬುವವರು ಹಣ  ಹಾಕಿದ್ದರು. ಚಿತ್ರದ ಸಂಗೀತ, ಡಬ್ಬಿಂಗ್, ರೀ-ರೆಕಾರ್ಡಿಂಗ್, ಎಡಿಟಿಂಗ್ ಸೇರಿದಂತೆ ಪ್ರಮುಖ ಜವಬ್ದಾರಿಯನ್ನ ರಿಶಿಕೇಷ್ ವಹಿಸಿಕೊಂಡಿದ್ದ. 


ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ! 


ಪ್ರತಿಯಾಗಿ ಹಂತಹಂತವಾಗಿ 19 ಲಕ್ಷ ರೂ ಹಾಗೂ ಆನ್‌ಲೈನ್‌ ಮುಖಾಂತರ ಮತ್ತಷ್ಟು ನಗದು ರೂಪದಲ್ಲಿ ಹಣವನ್ನ ನಿರ್ಮಾಪಕರಿಂದ ಪಡೆದುಕೊಂಡಿದ್ದ. ಆದರೆ ಅರ್ಧ ಶೂಟಿಂಗ್ ಮುಗಿಯುವಷ್ಟರಲ್ಲೇ ಚಿತ್ರ ತಂಡದಿಂದ ಜಗಳವಾಡಿ ದೂರ ಸರಿದಿದ್ದ ರಿಷಿಕೇಷ್, ತಾನು ಹೇಳಿದವರನ್ನ ಸಹ ನಿರ್ಮಾಪಕರನ್ನಾಗಿ ಸೇರಿಸಿಕೊಳ್ಳಬೇಕು ಇಲ್ವಾದಲ್ಲಿ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೂಡ ಕೊಡುವುದಿಲ್ಲ ಎಂದಿದ್ದನಂತೆ. 


ಹೀಗೆ ಸುಮಾರು ಹತ್ತು ತಿಂಗಳುಗಳಿಂದ ಹಾರ್ಡ್ ಡಿಸ್ಕ್ ಕೊಡದೇ ಕರೆ ಮಾಡಿ ಕೇಳಿದರೆ ನಿರ್ಮಾಪಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ಛಾಯಗ್ರಾಹಕ ರಿಶಿಕೇಷ್ ವಿರುದ್ಧ ಆರೋಪಿಸಲಾಗಿದೆ. ಈ ಬಗ್ಗೆ ನಿರ್ಮಾಪಕಿ ರಾಜಲಕ್ಷ್ಮಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


ಇದನ್ನೂ ಓದಿ: ರೀಲ್ಸ್ ಮಾಡುವ ಆಂಟಿಯರೇ ಟಾರ್ಗೆಟ್: ಫೇಕ್ ಐಡಿಯಲ್ಲಿ ಪಟಾಯಿಸಿ ಚಕ್ಕಂದವಾಡ್ತಿದ್ದ ಖದೀಮ ಅಂದರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.