ಬೆಂಗಳೂರು: 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲ ಹಾಗೂ ಸಂಸ್ಥಾಪಕ ಆತ್ಯಾಚಾರವೆಸಗಿದ ಆರೋಪ ಹಿನ್ನೆಲೆ ವರ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ನರದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ನಿನ್ನೆ ಬೆಳಗ್ಗೆ ಎಂದಿನಂತೆ 8.30ಕ್ಕೆ ಶಾಲೆಗೆ ಹೋಗಿದ್ದಳು. ಶಾಲೆಯಲ್ಲಿರುವಾಗ ವಿಶ್ರಾಂತಿ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ ವಿದ್ಯಾರ್ಥಿನಿ ಮೇಲೆ ಅಟ್ಟಹಾಸ ಮೆರೆದು ನಂತರ ಕೇಕ್ ನೀಡಿ‌ ಕಳುಹಿಸಿದ್ದ. 


ಇದನ್ನೂ ಓದಿ- ಬೆಂಗಳೂರಿನಲ್ಲಿ ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಸೈಕೋ ಪತಿ!


ಸಂಜೆ ವಿದ್ಯಾರ್ಥಿನಿ ಮನೆಗೆ ಬಂದಾಗ  ಹೊಟ್ಟೆನೋವು ಎಂದು ಪೋಷಕರ ಬಳಿ ನೋವು ತೋಡಿಕೊಂಡಿದ್ದಳು. ಮಗಳ ಒಳ ಉಡುಪಿನಲ್ಲಿ ರಕ್ತಸ್ರಾವವಾಗಿರುವುದನ್ನ ಗಮನಿಸಿದ ತಾಯಿ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಈ ಬಗ್ಗೆ ಮಗಳನ್ನು ಪ್ರಶ್ನಿಸಿದಾಗ 'ನಿನ್ನೆ ಬೆಳಗ್ಗೆ 11.30 ರ ವೇಳೆ ಪ್ರಾಂಶುಪಾಲರು ಅವರ ರೂಮ್ ಗೆ ಕರೆದೊಯ್ದಿದ್ದಾರೆ.  ಬಾಗಿಲು ಹಾಗೂ ಕಿಟಕಿ ಮುಚ್ಚಿ ಮಲಗಿ ವಿಶ್ರಾಂತಿ ಪಡೆಯಲು ಸೂಚಿಸಿದ್ದರು. ಬಳಿಕ ನನ್ನ ಒಳ ಉಡುಪು ತೆಗೆದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ನೋವು ತಾಳಲಾರದೇ ಅತ್ತಾಗ ತನಗೆ ಹೆದರಿಸಿದ್ದಾರೆ. ಬಾತ್ ರೂಮ್ ಗೆ ಕರೆದೊಯ್ದು ಖಾಸಗಿ ಭಾಗವನ್ನ ಸ್ವಚ್ಚಗೊಳಿಸಿದ್ದಾರೆ. ಪ್ರತಿದಿನ ಇದೇ ರೀತಿ ಮಾಡುವುದಾಗಿ ಹೇಳಿ ಕೇಕ್ ನೀಡಿ ಕಳುಹಿಸಿದ್ದರು ಎಂದು ತಾಯಿ ಬಳಿ ಹೇಳಿಕೊಂಡಿದ್ದಳು.


ಇದನ್ನೂ ಓದಿ- ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ: ಸಾವಿನ ನೈಜ ಕಾರಣ ತಿಳಿಯಲು ಮರೋಣತ್ತರ ಪರೀಕ್ಷೆ


ಈ ಸಂಬಂಧ ವರ್ತೂರು ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ