Terrible accident in Bidar: ಬೀದರ್‌ನಲ್ಲಿ ಭೀಕರ ಅಪಘಾತವಾಗಿದ್ದು, ಒಂದೇ ಕುಟುಂಬದ ನಾಲ್ವರು ದುರ್ಮರಣವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬಸ್ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲವೇ ನಾಲ್ವರು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಈ ದುರ್ಘಟನೆಯಲ್ಲಿ ತೆಲಂಗಾಣ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗಂಡ-ಹೆಂಡತಿ ಹಾಗೂ ಮಗ ಸೇರಿ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ. ಬೀದರ್ - ತೆಲಂಗಾಣ ಗಡಿಯ ದೇವವನ ಪಾರ್ಕ್ ಬಳಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ಲಾಯರ್‌ ಜಗದೀಶ್‌ ಬಗ್ಗೆ ಯಮುನಾ ಹೇಳಿದ್ದೇನು ?


ಜಗನ್ನಾಥ (35), ರೇಣುಕಾ (34), ವಿನೋದ್ ಕುಮಾರ್ (14) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರು ಎಂದು ತಿಳಿದುಬಂದಿದೆ. ಜಮೀನಿನಲ್ಲಿ ಕೆಲಸ‌ ಮುಗಿಸಿಕೊಂಡು ಮನೆಗೆ ವಾಪಸ್ ಆಗುವ ವೇಳೆ ಅಪಘಾತವಾಗಿದೆ. 


ಹೈದರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮೃತ ನಾಲ್ವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ಮತ್ತು ಬಸ್‌ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.


ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿಎಂ ಸಿದ್ದರಾಮಯ್ಯನೇ ಕಾರಣ! ʼಕೈʼ ನಾಯಕನಿಂದಲೇ ಗಂಭೀರ ಆರೋಪ


ಬೀದರ್ ಗಡಿಗೆ ಹೊಂದಿಕೊಂಡಿರುವ ತೆಲಂಗಾಣದ ಗಣೇಶಪುರ ಬಳಿ ಅಂದರೆ ಬೀದರ್-ತೆಲಂಗಾಣದ ಬಾರ್ಡರ್ ಕಮಾನ್ ಬಳಿಯಿಂದ 1 KM ಅಂತರದಲ್ಲಿ ಅಪಘಾತ ಸಂಭವಿಸಿದೆ. ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆ ಬಳಿ‌ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹವನ್ನು ಬೀದರ್ ಬ್ರಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.