ಸಿಲಿಕಾನ್ ಸಿಟಿಯಲ್ಲಿ ಮಾಂಸ ದಂಧೆ: ಟರ್ಕಿ ಮೂಲದ ಮಹಿಳೆ ಸೇರಿ ಐವರ ಬಂಧನ

 ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರನ್ನ ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸೇರಿ  ಐವರು ಆರೋಪಿಗಳನ್ನ  ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಟರ್ಕಿ ಮೂಲದ ಬಯೋನ್ಯಾಜ್, ಬಿ.ಇ. ಪದವೀಧನಾಗಿರುವ ವೈಶಾಕ್, ತಮಿಳುನಾಡು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ.

Written by - VISHWANATH HARIHARA | Edited by - Manjunath N | Last Updated : Jan 9, 2024, 03:46 PM IST
  • ಹದಿನೈದು ವರ್ಷಗಳ ಹಿಂದೆಯೇ ಟರ್ಕಿಯಿಂದ ಬಂದಿದ್ದ ಮಹಿಳೆ ಬಯೋನ್ಯಾಜ್, ರೋಹಿತ್ ಸ್ವಾಮಿಗೌಡ ಎಂಬಾತನನ್ನ ಮದುವೆಯಾಗಿ ಬೆಂಗಳೂರಿನಲ್ಲಿಯೇ ನೆಲೆಸಿದ್ದಳು
  • ಕೆಲ ವರ್ಷಗಳ ಹಿಂದೆ ಪತಿ ತೀರಿ ಹೋಗಿದ್ದ
  • ಬಳಿಕ ದೇಶ, ವಿದೇಶದ ಯುವತಿಯರನ್ನ ಬಳಸಿಕೊಂಡು ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು
ಸಿಲಿಕಾನ್ ಸಿಟಿಯಲ್ಲಿ ಮಾಂಸ ದಂಧೆ: ಟರ್ಕಿ ಮೂಲದ ಮಹಿಳೆ ಸೇರಿ ಐವರ ಬಂಧನ title=

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರನ್ನ ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸೇರಿ  ಐವರು ಆರೋಪಿಗಳನ್ನ  ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಟರ್ಕಿ ಮೂಲದ ಬಯೋನ್ಯಾಜ್, ಬಿ.ಇ. ಪದವೀಧನಾಗಿರುವ ವೈಶಾಕ್, ತಮಿಳುನಾಡು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗಿಯಾಗುವ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ಖರ್ಗೆ 

ದೊಮ್ಮಲೂರಿನ ಎಚ್.ಎಸ್.ಬಿ.ಸಿ ಲೇಔಟನ ಖಾಸಗಿ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಹಲಸೂರು ಠಾಣಾ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಬೈಯ್ಯಪ್ಪನಹಳ್ಳಿ ಠಾಣಾ ಪೊಲೀಸರಿಗೆ ವಹಿಸಲಾಗಿತ್ತು. ತನಿಖೆ ಮುಂದುವರೆಸಿದ ಬೈಯ್ಯಪ್ಪನಹಳ್ಳಿ ಪೊಲೀಸರು ಬೆಂಗಳೂರು ಡೇಟಿಂಗ್ ಕ್ಲಬ್ ಹೆಸರಿನ ಟೆಲಿಗ್ರಾಂ ಗ್ರೂಪಲ್ಲಿ ಅಡ್ಮಿನ್ ಆಗಿದ್ದ ಆರೋಪಿ ವೈಶಾಕ್'ನನ್ನ ಬಂಧಿಸಿದ್ದರು. ಬಳಿಕ ಆತನ ಮಾಹಿತಿ ಮೇರೆಗೆ ಟರ್ಕಿ ಮೂಲದ ಬಯೋನ್ಯಾಜ್, ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್'ನನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆಮಂತ್ರಿಸಲ್ಪಟ್ಟ ವಿಐಪಿಗಳು ಯಾರ್ಯಾರು ಗೊತ್ತಾ? 

ಹದಿನೈದು ವರ್ಷಗಳ ಹಿಂದೆಯೇ ಟರ್ಕಿಯಿಂದ ಬಂದಿದ್ದ  ಮಹಿಳೆ ಬಯೋನ್ಯಾಜ್, ರೋಹಿತ್ ಸ್ವಾಮಿಗೌಡ ಎಂಬಾತನನ್ನ ಮದುವೆಯಾಗಿ ಬೆಂಗಳೂರಿನಲ್ಲಿಯೇ ನೆಲೆಸಿದ್ದಳು. ಕೆಲ ವರ್ಷಗಳ ಹಿಂದೆ ಪತಿ ತೀರಿ ಹೋಗಿದ್ದ. ಬಳಿಕ ದೇಶ, ವಿದೇಶದ ಯುವತಿಯರನ್ನ ಬಳಸಿಕೊಂಡು ನಿರಂತರವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು.  ಬಯೋನ್ಯಾಜ್ ಬೆಂಗಳೂರು, ಜೈಪುರ, ಚೆನ್ನೈ, ಮೈಸೂರು, ದೆಹಲಿ, ಉದಯಪುರ, ಮುಂಬೈ ನಗರಗಳಲ್ಲಿ ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಮಧ್ಯವರ್ತಿಗಳ ಜೊತೆ ಸಂಪರ್ಕದಲ್ಲಿದ್ದುಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದಳು ಎಂಬುದು ಬಯಲಾಗಿದೆ. ಸದ್ಯ ಆರೋಪಿಗಳ ವಶದಲ್ಲಿದ್ದ ಉಜ್ಬೇಕಿಸ್ತಾನ್, ಕಜಕಿಸ್ತಾನ ಮೂಲದ ಆರು ಯುವತಿಯರು, ಬಾಂಗ್ಲಾದೇಶ ಮೂಲದ ಓರ್ವ ಹಾಗೂ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮೂಲದ ಇಬ್ಬರು ಮಹಿಳೆಯರನ್ನ ರಕ್ಷಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News