ಬೆಂಗಳೂರು: ಜ್ಯೂಸ್‌ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿ ಪ್ರಜ್ಞೆ ತಪ್ಪಿದ ಬಳಿಕ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ ವಿಕೃತ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರನಿಗೆ ʼಸುಪ್ರೀಂʼ ಸಂಕಷ್ಟ


30 ವರ್ಷದ ಮಹಿಳೆ ದೂರಿನ ಮೇಲೆ ಆಕೆಯ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿ ವೆಂಕಟಸ್ವಾಮಿಯನ್ನು ಪ್ರೀತಿಸಿ 2ನೇ ಮದುವೆಯಾಗಿದ್ದಳು. ಮದುವೆಯಾಗಿ ಆರಂಭದಲ್ಲಿ ಪತ್ನಿ ಜತೆಗೆ ಅನ್ಯೋನ್ಯವಾಗಿದ್ದ ಪತಿ, ನಂತರ ವರದಕ್ಷಿಣೆಗಾಗಿ ಪೀಡಿಸುತ್ತಿದ್ದನಂತೆ. 


ಇದನ್ನು ಓದಿ: ಇರೋರೆ ಬಿಟ್ಟು ಹೋಗ್ತಿದ್ದಾರೆ ಇನ್ನು ಅವರೆಲ್ಲಿ ಗೆಲ್ತಾರೆ 123: ಜೆಡಿಎಸ್ ಬಗ್ಗೆ ಸಂಸದ ವಿ.ಶ್ರೀನಿವಾಸಪ್ರಸಾದ್ ವ್ಯಂಗ್ಯ


ಇತ್ತೀಚೆಗೆ ಜ್ಯೂಸ್‌ನಲ್ಲಿ ಮತ್ತು ಬರುವ ವಸ್ತು ಬೆರೆಸಿ ಪತ್ನಿಗೆ ಕೊಟ್ಟಿದ್ದ. ಪತ್ನಿ ಪ್ರಜ್ಞೆ ತಪ್ಪಿದ ಬಳಿಕ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ್ದನಂತೆ. ಅಲ್ಲದೇ ಸ್ನೇಹಿತನೊಂದಿಗೆ ಲೈಂಗಿಕ ಕ್ರಿಯೆ  ನಡೆಸುವಂತೆ ಪತ್ನಿಗೆ ಪೀಡಿಸುತ್ತಿದ್ದನಂತೆ. ಈ ನಡುವೆ ದೂರುದಾರ ಮಹಿಳೆಯ ತಂದೆ ಮೃತಪಟ್ಟಿದ್ದರು. ತಂದೆಗೆ ಬರುವ ಪೆನ್ಷನ್​ ಹಣ ಕೊಡುವಂತೆ ವಿಕೃತ ಮನಸ್ಸಿನ ಪತಿ ಹಿಂಸೆ ಕೊಡುತ್ತಿದ್ದನಂತೆ. ಹಣ ಕೊಡಲು ನಿರಾಕರಿಸಿದಾಗ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರು ದಾಖಲಿಸಿದ್ದಾಳೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ