ಅನೈತಿಕ ಸಂಬಂಧದ ಕುಣಿಕೆಯೋ..? ಪೊಲೀಸ್ ಕಿರುಕುಳವೋ..?: ಸತ್ತೇ ಹೋಯಿತು ಬಡ ಜೀವ..!

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮನೆಯವರ ಖುಷಿಗೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಿಖಿಲ್ ಎಂಬಾತ ಕೇಶ್ವಾಪೂರದ ಪ್ರೀತಿ ಪೋಗಳಾಪೂರ ಎಂಬ ಯುವತಿಯನ್ನು ಮದುವೆಯಾಗಿದ್ದ.   

Written by - Yashaswini V | Last Updated : Nov 3, 2023, 03:28 PM IST
  • 11 ತಿಂಗಳ ಹಿಂದೆ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದರು.
  • ಆದರೆ ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು.
  • ಇದರಿಂದಾಗಿ ತವರು ಮನೆಗೆ ಹೋಗಿದ್ದ ಪ್ರೀತಿ, ಕೇಶ್ವಾಪೂರ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು.
ಅನೈತಿಕ ಸಂಬಂಧದ ಕುಣಿಕೆಯೋ..? ಪೊಲೀಸ್ ಕಿರುಕುಳವೋ..?: ಸತ್ತೇ ಹೋಯಿತು ಬಡ ಜೀವ..!  title=

ಹುಬ್ಬಳ್ಳಿ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅಂತ ಗಾದೆ ಮಾತಿದೆ. ಆದರೆ ಇಲ್ಲೊಂದು ಕುಟುಂಬದ ಜಗಳ ಗಂಡನ ಆತ್ಮಹತ್ಯೆಗೆ ಕಾರಣವಾಗಿದೆ. ಪತ್ನಿಯ ಅನೈತಿಕ ಸಂಬಂಧ ಹಾಗೂ ಪೊಲೀಸರ ಕಿರುಕುಳಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಈ ಕಹಾನಿ ಓದಿ... 

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮನೆಯವರ ಖುಷಿಗೆ ಹುಬ್ಬಳ್ಳಿಯ ಕೋಟಿಲಿಂಗೇಶ್ವರ ನಿಖಿಲ್ ಎಂಬಾತ ಕೇಶ್ವಾಪೂರದ ಪ್ರೀತಿ ಪೋಗಳಾಪೂರ ಎಂಬ ಯುವತಿಯನ್ನು ಮದುವೆಯಾಗಿದ್ದ. ಮೊದಲಿಗೆ ಚನ್ನಾಗಿಯೇ ಇದ್ದ ಕುಟುಂಬದಲ್ಲಿ ಯುವತಿಯ ಅನೈತಿಕ ಸಂಬಂಧದಿಂದ ಬಿರುಕು ಮೂಡಿದೆ. ಇದನ್ನು ವಿರೋಧಿಸಿದ ನಿಖಿಲ್ ವಿರುದ್ಧ ಪತ್ನಿ ಪ್ರೀತಿ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪೋಲಿಸರ ಸಂಧಾನದಕ್ಕೆ ಬೇಸತ್ತು ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಇದನ್ನೂ ಓದಿ- ಸೋದರತ್ತೆ ಮಸಲತ್ತು: ಗಂಡನ ಮನೆಯವರ ಅನುಮಾನಕ್ಕೆ ಚೆಂದುಳ್ಳಿ ಚೆಲುವೆ ನೇಣಿಗೆ ಶರಣು

ನಮ್ಮ ಮಗನಿಗೆ ಪ್ರೀತಿ ಕುಟುಂಬಸ್ಥರು ಹಾಗೂ ಪೊಲೀಸ್ ಕಿರುಕುಳವೇ ಕಾರಣ ಅಂತ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಾತೇನಹಳ್ಳಿ  ಹಾಗೂ ಎಎಸ್ಐ ಜಯಶ್ರೀ ಛಲವಾದಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿ- ಕುತ್ತಿಗೆ ಸೀಳಿದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

11 ತಿಂಗಳ ಹಿಂದೆ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದರು. ಆದರೆ ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು.  ಇದರಿಂದಾಗಿ ತವರು ಮನೆಗೆ ಹೋಗಿದ್ದ ಪ್ರೀತಿ, ಕೇಶ್ವಾಪೂರ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಈ ಹಿನ್ನೆಲೆಯಲ್ಲಿ ನಿಖಿಲ್ ಮತ್ತು ಕುಟುಂಬಸ್ಥರು ನಿನ್ನೆ ಕೇಶ್ವಾಪುರ ಠಾಣೆಗೆ ನಿಖಿಲ್ ಕರೆಯಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ನೋಟಿಸ್ ನೀಡಿ ನಿಖಿಲ್ ನನ್ನು ಠಾಣೆಗೆ ಕರೆಸಿ ಪೋಲಿಸರು ಮಾನಸಿಕ ಕಿರುಕುಳ ನೀಡಿದ್ದು, ಇದರಿಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಟುಂಬಸ್ಥರು ದೂರಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News