ಚಾಮರಾಜನಗರ: ಪತ್ನಿ ಮಾಡಿದ ರೀಲ್ಸ್‌ನಿಂದ ಮನನೊಂದು ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಮೃತನ ಸಹೋದರ ಮಹಾದೇವಸ್ವಾಮಿ ಕುಮಾರ್‌ನ ಪತ್ನಿ ರೂಪಾ, ರೂಪಾಳ‌ ಸೋದರಮಾವ ಗೋವಿಂದ ವಿರುದ್ಧ ದೂರು ನೀಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸೋಷಿಯಲ್‌ ಮಿಡಿಯಾ ಸ್ಟಾರ್‌ ಕನಕ ಕೊಟ್ಟೂರು ಸಿನಿಮಾಗೆ ಪದಾರ್ಪಣೆ ಮಾಡುತ್ತಾರಾ?


ಏನಿದು ರೀಲ್ಸ್ ಕಥೆ? 


ಕಳೆದ ತಿಂಗಳ 10ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಹಾಗೂ ರೂಪಾ ತೆರಳಿದ್ದರು. ಅಲ್ಲಿ ಒಂದು ದಿನ ಇದ್ದ ಕುಮಾರ್ ಪಿ.ಜಿ‌‌.ಪಾಳ್ಯಕ್ಕೆ ವಾಪಾಸಾದರೇ ರೂಪಾ ಅಲ್ಲೇ ಉಳಿದುಕೊಂಡಿದ್ದಳಂತೆ. 


ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ತನ್ನ ಸಹೋದರಿ ಜೊತೆ ಸೇರಿ ʼಕರಿಮಣಿʼ ಮಾಲೀಕ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ್ದಳಂತೆ. ಈ ವಿಷಯವನ್ನು ಸ್ನೇಹಿತರು ಕುಮಾರ್‌ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಮನನೊಂದ ಪತಿ ಕುಮಾರ್ ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಇದನ್ನೂ ಓದಿ: ಕರಿಮಣಿ ಮಾಲೀಕ ಸಾಂಗ್ ಸೋಷಿಯಲ್‌ ಮಿಡಿಯಾ ಟ್ರೆಂಡ್‌


ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.