ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದಿಂದ ಬೇಸತ್ತ ಪತಿ ತನ್ನ ಪತ್ನಿಯನ್ನು ಭೀಕರ ಕೊಲೆ ಮಾಡಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾಗಿರುವ ಪತ್ನಿ ಶಾನವಾಜ್(30) ಎಂದು ಗುರುತಿಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ : ಬಸವರಾಜ ಬೊಮ್ಮಾಯಿ 


ಪತಿ ಅಂಜುಂಖಾನ್ ಕೌಟುಂಬಿಕ ಕಲಹದಿಂದ ಬೇಸತ್ತು ಅಲಕಾಪುರ ಬಳಿ ಇರುವ ಎಸ್‌ಡಿಎಂ ವೈನರಿ ಬಳಿ ರಾತ್ರಿ 8.45 ರ ಸಮಯದಲ್ಲಿ ಚಾಕುವಿನಿಂದ ಪತ್ನಿ ಶಾನವಾಜ್ ಕತ್ತು ಕೊಯ್ದು ನಂತರ ಗೌರಿಬಿದನೂರು ಗ್ರಾಮಾಂತರ  ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.


ಕೊಲೆಗೆ ಅಕ್ರಮ ಸಂಬಂಧ ಕಾರಣ?


ಪತ್ನಿ ಶಾನವಾಜ್  ಪರ ಪುರಷನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದೇ ಕಾರಣವಾಗಿದೆ. ಈ ಬಗ್ಗೆ ಹಲವು ಸಾರಿ ರಾಜೀ ಪಂಚಾಯತಿ ನಡೆದು ಇಬ್ಬರ ಮದ್ಯ ಸಂಧಾನವಾಗಿದ್ದರೂ ಅಕ್ರಮ ಸಂಬಂಧ ಮುಂದುವರೆದಿದ್ದ ಕಾರಣ ಗಂಡ ಅಂಜುಂಖಾನ್ ಬೇಸತ್ತು ರಾತ್ರಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.


ಇದನ್ನೂ ಓದಿ : ಕೋಟಿಗಟ್ಟಲೆ ಡೀಲ್ ಮಾಡಿದ ಚೈತ್ರಾ ಕುಂದಾಪುರ ಬೆಂಬಲಕ್ಕೆ ನಾವು ನಿಂತಿಲ್ಲ-ಸಚಿವೆ ಶೋಭಾ ಕರಂದ್ಲಾಜೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.