ಹೇಳುತ್ತಿದ್ದಿದ್ದು ದನದ ವ್ಯಾಪಾರ, ಮಾಡುತ್ತಿದ್ದಿದ್ದು ಆನೆ ದಂತ ಮಾರಾಟ...ಕೊನೆಗೂ ಸಿಕ್ಕಿಬಿದ್ದ ಐನಾತಿ

ಆನೆ ದಂತವನ್ನು ಬಚ್ಚಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಕಣ್ಣೀಯನಪುರ ಕಾಲೋನಿಯಲ್ಲಿ ನಡೆದಿದೆ.

Written by - Zee Kannada News Desk | Last Updated : Jun 11, 2022, 12:07 AM IST
  • ಆನೆ ದಂತವನ್ನು ಬಚ್ಚಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಕಣ್ಣೀಯನಪುರ ಕಾಲೋನಿಯಲ್ಲಿ ನಡೆದಿದೆ.
ಹೇಳುತ್ತಿದ್ದಿದ್ದು ದನದ ವ್ಯಾಪಾರ, ಮಾಡುತ್ತಿದ್ದಿದ್ದು ಆನೆ ದಂತ ಮಾರಾಟ...ಕೊನೆಗೂ ಸಿಕ್ಕಿಬಿದ್ದ ಐನಾತಿ title=

ಚಾಮರಾಜನಗರ: ಆನೆ ದಂತವನ್ನು ಬಚ್ಚಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಕಣ್ಣೀಯನಪುರ ಕಾಲೋನಿಯಲ್ಲಿ ನಡೆದಿದೆ.

ಕೇರಳ‌ ಮೂಲದ ಬಾಲನ್(54) ಬಂಧಿತ ಆರೋಪಿ. ಈತ ದನದ ವ್ಯಾಪಾರದ ವೃತ್ತಿಯಲ್ಲಿ ಅಕ್ರಮವಾಗಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಈತನ ವ್ಯಾಪಾರ-ವಹಿವಾಟಿನ ಮೇಲೆ ಕಣ್ಣಿಟ್ಟಿದ್ದ ರಾಜ್ಯದ ಪೊಲೀಸರು ಮಾಹಿತಿ ಸಂಗ್ರಹಿಸಿ ಐನಾತಿಯನ್ನು ಬಂಧಿಸಿದ್ದಾರೆ. No description available.

ಬಾಲನ್ ನಿಂದ 3 ಕೆಜಿಗೂ ಹೆಚ್ಚು ತೂಕದ 3 ಆನೆ ದಂತಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಗುಂಡ್ಲುಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News