ವಾರದ ಹಿಂದಷ್ಟೇ ಪೋಸ್ಟಿಂಗ್, ಮೊದಲ ದಿನವೇ ಲಂಚಕ್ಕೆ ಕೈಯೊಡ್ಡಿದ್ದ ಸಹಾಯಕ ರಿಜಿಸ್ಟ್ರಾರ್ ಎಸಿಬಿ ಬಲೆಗೆ!

Jharkhand ACB Nabs assistant registrar: ಜಾರ್ಖಂಡ್‌ ದಲ್ಲಿ JPSC ಪರೀಕ್ಷೆಯಲ್ಲಿ 108ನೇ ರ್ಯಾಂಕ್ ಪಡೆದು 1 ವಾರದ ಹಿಂದೆಯಷ್ಟೇ ಮೊದಲ ಪೋಸ್ಟಿಂಗ್‌ ಪಡೆದುಕೊಂಡಿದ್ದ ಮಿಥಾಲಿ ಶರ್ಮಾ ಅವರು ಮೊದಲ ದಿನವೇ ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

Written by - Puttaraj K Alur | Last Updated : Jul 17, 2023, 11:43 PM IST
  • ಮೊದಲ ದಿನ, ಮೊದಲ ಪೋಸ್ಟಿಂಗ್‌, ಮೊದಲ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಅಧಿಕಾರಿ!
  • 10 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್‍ಹ್ಯಾಂಡ್‍ ಆಗಿ ಎಸಿಬಿ ಬಲೆಗೆ ಬಿದ್ದ ಸಹಾಯಕ ರಿಜಿಸ್ಟ್ರಾರ್‌
  • ಜಾರ್ಖಂಡ್‍ನ JPSC ಪರೀಕ್ಷೆಯಲ್ಲಿ 108ನೇ ರ್ಯಾಂಕ್ ಪಡೆದಿದ್ದ ಮಿಥಾಲಿ ಶರ್ಮಾ ವಿರುದ್ಧ ಪ್ರಕರಣ
ವಾರದ ಹಿಂದಷ್ಟೇ ಪೋಸ್ಟಿಂಗ್, ಮೊದಲ ದಿನವೇ ಲಂಚಕ್ಕೆ ಕೈಯೊಡ್ಡಿದ್ದ ಸಹಾಯಕ ರಿಜಿಸ್ಟ್ರಾರ್ ಎಸಿಬಿ ಬಲೆಗೆ! title=
ಎಸಿಬಿ ಬಲೆಗೆ ಬಿದ್ದ ಸಹಾಯಕ ರಿಜಿಸ್ಟ್ರಾರ್‌!

ನವದೆಹಲಿ: ದೇಶದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಪಡೆಯುವುದು ಕಾಮನ್ ಆಗಿಬಿಟ್ಟಿದೆ. ಸರ್ಕಾರ ನೀಡುವ ಕೈತುಂಬಾ ಸಂಬಳ ಸಾಲದೆಂಬಂತೆ ಸಾಮಾನ್ಯ ಜನರ ರಕ್ತ ಹೀರಿ ಗಿಂಬಳ ಪಡೆಯುತ್ತಾರೆ. ‘ಸರ್ಕಾರಿ ಕೆಲಸ ದೇವರ ಕೆಲಸ’ ಅನ್ನೋದನ್ನು ಮರೆತು ಭ್ರಷ್ಟಾಚಾರ ನಡೆಸುತ್ತಾರೆ. ಇದಕ್ಕೆ ಸ್ಪಷ್ಟ ನಿದರ್ಶನವೇ ವಾರದ ಹಿಂದಷ್ಟೇ ಪೋಸ್ಟಿಂಗ್ ಆಗಿ ಕೆಲಸಕ್ಕೆ ಸೇರಿದ ಮೊದಲ ದಿನವೇ ಲಂಚಕ್ಕೆ ಕೈಯೊಡ್ಡಿದ್ದ ಈ ಸಹಾಯಕ ರಿಜಿಸ್ಟ್ರಾರ್!

ಹೌದು, ಜಾರ್ಖಂಡ್‌ ರಾಜ್ಯದಲ್ಲಿ JPSC ಪರೀಕ್ಷೆಯಲ್ಲಿ 108ನೇ ರ್ಯಾಂಕ್ ಪಡೆದು 1 ವಾರದ ಹಿಂದೆಯಷ್ಟೇ ಮೊದಲ ಪೋಸ್ಟಿಂಗ್‌ ಪಡೆದುಕೊಂಡಿದ್ದ ಮಿಥಾಲಿ ಶರ್ಮಾ ಅವರು ಮೊದಲ ದಿನವೇ ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿSeema Haider: ಪಾಕ್ ಸೀಮೆದಾಟಿ ಭಾರತಕ್ಕೆ ಹೇಗೆ ಬಂದಳು ಪಬ್‌ಜಿ ಪ್ರೇಮಿ ಸೀಮಾ ಹೈದರ್?

ಕೊಡರ್ಮಾ ವೃತ್ತದ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ಸಹಾಯಕ ರಿಜಿಸ್ಟ್ರಾರ್‌ ಆಗಿದ್ದ ಮಿಥಾಲಿ ಶರ್ಮಾರನ್ನು ಜಾರ್ಖಂಡ್‌ನ ಹಜಾರಿಬಾಗ್ ಭ್ರಷ್ಟಾಚಾರ ನಿಗ್ರಹ ದಳ (ACB) ತಂಡವು ಶುಕ್ರವಾರ ಬಂಧಿಸಿದೆ. 10 ಸಾವಿರ ರೂ. ಲಂಚ ಪಡೆಯುವಾಗ ಮಿಥಾಲಿ ಶರ್ಮಾರ ರೆಡ್‌ ಹ್ಯಾಂಡ್‌ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಿಥಾಲಿ ಶರ್ಮಾ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಕೊಡೆರ್ಮಾ ವ್ಯಾಪಾರ ಮಂಡಲ(ಬೀಜ ವಿತರಣೆಯ ನೋಡಲ್ ಏಜೆನ್ಸಿ)ದ ನಿರ್ವಹಣಾ ಸಮಿತಿಯ ಸದಸ್ಯ ರಾಮೇಶ್ವರ ಪ್ರಸಾದ್‌ ಯಾದವ್‌ ಎಂಬುವರು ದೂರು ನೀಡಿದ್ದರು. ಜೂನ್ 16ರಂದು ಮಿಥಾಲಿ ಶರ್ಮಾ ನಮ್ಮ ಕಚೇರಿಯ ಪರಿಶೀಲನೆಗೆ ಆಗಮಿಸಿದ್ದರು. ಕಾರಣವಿಲ್ಲದೆ ನನಗೆ ಶೋಕಾಸ್ ನೋಟಿಸ್ ನೀಡಿದರು. ಇದನ್ನು ಪ್ರಶ್ನಿಸಿದ ನನಗೆ 20 ಸಾವಿರ ರೂ ಹಣ ನೀಡುವಂತೆ ಕೇಳಿದ್ದರು’ ಅಂತಾ ರಾಮೇಶ್ವರ ಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: Indian Railways: ಅತ್ಯಧಿಕ ಸಂಖ್ಯೆಯ ಪ್ಲಾಟ್‌ಫಾರ್ಮ್‌ ಹೊಂದಿರುವ ಭಾರತದ ರೈಲ್ವೆ ನಿಲ್ದಾಣಗಳು

ತಾನು ಏನೂ ತಪ್ಪು ಮಾಡಿಲ್ಲದ ಕಾರಣ ಯಾವುದೇ ಕಾರಣಕ್ಕೂ ಲಂಚ ನೀಡುವುದಿಲ್ಲವೆಂದು ರಾಮೇಶ್ವರ ಪ್ರಸಾದ್‌ ನಿರ್ಧರಿಸಿದ್ದರು. ಕೂಡಲೇ ಈ ಬಗ್ಗೆ ಜಾರ್ಖಂಡ್‌ನ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದರು. ಇದರ ಆಧಾರದ ಮೇಲೆ ಮಿಥಾಲಿ ಶರ್ಮಾರನ್ನು ಲಂಚ ಪಡೆಯುವ ವೇಳೆ ರೆಡ್‍ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ಬಗ್ಗೆ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News