ಬೆಂಗಳೂರು: ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾದ ಪರಿಣಾಮ ಕನ್ನಡದ ಕಿರುತೆರೆ ನಟಿ ಚೇತನಾ ರಾಜ್‌ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಪ್ರೀತಿ, ಕಂಬನಿ, ಭಾವನೆಗಳ ಬೆಲೆ ಹೇಳಲಿದ್ದಾನೆ ನಮ್ಮ 'ಚಾರ್ಲಿ'..!


ಸೋಮವಾರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಫ್ಯಾಟ್‌ ಸರ್ಜರಿಗೆಂದು ಚೇತನಾ ತೆರಳಿದ್ದರು. ಆದರೆ ಈ ವಿಚಾರ ಪೋಷಕರಿಗೆ ತಿಳಿಸಿರಲಿಲ್ಲ. ಬಳಿಕ ವಿಷಯ ತಿಳಿದುಕೊಂಡ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಇನ್ನು ಸರ್ಜರಿ ನಡೆಸುತ್ತಿರುವಾಗ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದು, ಗಂಭೀರ ಪರಿಸ್ಥಿತಿಯಲ್ಲಿರುವ ಅವರನ್ನು ತಕ್ಷಣವೇ ಬೇರೆ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಆದರೆ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.  


ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ಕುಟುಂಬದವರ ಜೊತೆ ವಾಸವಿದ್ದರು. ನಟಿಯ ಸಾವಿನಿಂದ ಕಂಗಾಲಾದ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಮಗಳು ಸಾವಿಗೀಡಾಗಿದ್ದಾಳೆ ಎಂದು ಆರೋಪ ಮಾಡಿದ್ದಾರೆ. 


​ಇದನ್ನು ಓದಿ: ‘ವಿಕ್ರಾಂತ್ ರೋಣ’ಗೆ ಸಲ್ಮಾನ್ ಸಾಥ್ : ಬಾಲಿವುಡ್ ಅಂಗಳದಲ್ಲಿ ಕಿಚ್ಚನ ಹವಾ!


ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ಚೇತನಾ ರಾಜ್‌ ನಟಿಸುತ್ತಿದ್ದರು. ಅಷ್ಟೇ ಅಲ್ಲದೆ, ಇನ್ನಷ್ಟೇ ಬಿಡುಗಡೆಯಾಗಬೇಕಿರುವ ಹವಾಯಾಮಿ ಸಿನಿಮಾದಲ್ಲೂ ಇವರು ನಟಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ