ಹುಬ್ಬಳ್ಳಿ: ಜಮೀನು ವ್ಯವಹಾರದಲ್ಲಿ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹು-ಧಾ ಸಿಸಿಬಿ ಪೊಲೀಸರು ನಟೋರಿಸ್ ರೌಡಿ ಬಚ್ಚಾ ಖಾನ್ ಸೇರಿದಂತೆ 8 ಜನರನ್ನು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ಮಾಹಿತಿ ನೀಡಿರುವ ಹು-ಧಾ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ (Hu-Dha Police Commissioner N. Sasikumar), 
ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಬಚ್ಚಾಖಾನ್ ಸಹಚರರ ತಂಡವು ನಗರದ ವ್ಯಕ್ತಿಯೋರ್ವನಿಗೆ ನಿರಂತರವಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು  ತಿಳಿಸಿದರು.


ಇದನ್ನೂ ಓದಿ- ಹೆಚ್ಚಿನ ದುಡ್ಡಿಗಾಗಿ ನಡುರಸ್ತೆಯಲ್ಲಿ ತಾಯಿ ಮಗುವನ್ನು ಆಟೋದಿಂದ ಇಳಿಸಿದ್ದವನ ವಿಡಿಯೋ ವೈರಲ್!


ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಖರೀದಿಗಾರರು ಹಾಗೂ ಮಾರಾಟಗಾರರ ನಡುವೆ ವ್ಯವಹಾರಕ್ಕೆ ಸಂಬಂಧಿಸಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಬಚ್ಚಾಖಾನ್ ಸಹಚರರ ತಂಡವು ಜಮೀನು ಮಾರಾಟಗಾರರಿಗೆ ಕೋಟ್ಯಾಂತರ ರೂ. ಕೊಡುವಂತೆ ನಿರಂತರವಾಗಿ ಬೆದರಿಕೆ ಕರೆಗಳನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ಸಿಸಿಬಿ ಪೊಲೀಸ್ ಠಾಣೆಗೆ (CCB Police Station) ದೂರು ಸಲ್ಲಿಸಿದ್ದರು.


ದೂರಿನ ಆಧಾರದ ಮೇಲೆ ಆರೋಪಿಗಳ ಪತ್ತೆಗಾಗಿ 3 ತಂಡ ರಚಿಸಿದ್ದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹು-ಧಾ.ದಲ್ಲಿ 7 ಜನರನ್ನು ಬಂಧಿಸಲಾಗಿದ್ದು,  ಬೆಂಗಳೂರಿನಲ್ಲಿ ಆರೋಪಿ ಬಚ್ಚಾಖಾನ್ ನನ್ನು ವಶಕ್ಕೆ  ಪಡೆದಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.


ಇದನ್ನೂ ಓದಿ- Fraud Case: 8 ಮದುವೆ, ಸಾಲ ಕೊಡಿಸ್ತೀನಿ ಅಂತಾ 38 ಕೋಟಿ ವಂಚಿಸಿದ ನಕಲಿ JDS ಕಾರ್ಯಾಧ್ಯಕ್ಷೆ!


ಬಚ್ಚಾಖಾನ್ ಮೇಲೆ ಧಾರವಾಡದ ಫ್ರೂಟ್ ಇರಫಾನ್ ಕೊಲೆಗೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳ್ಳಾರಿ ಜೈಲಿನಲ್ಲಿದ್ದ ಬಚ್ಚಾಖಾನ್ ಪೆರೋಲ್ ಮೇಲೆ ಹೊರಬಂದಿದ್ದ. ಆತನನ್ನು ಬೆಂಗಳೂರಿನಲ್ಲಿ ಬಂಧಿಸಿ ಕರೆತರಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.