ಬೆಳಗಾವಿ : ವ್ಯಕ್ತಿಯೋರ್ವ ಪೊಲೀಸರ ಹೆಸರಲ್ಲಿ ಹಾಗೂ ರಮೇಶ್ ಜಾರಕಿಹೊಳಿ ಆಪ್ತರ ವಿರುದ್ಧ ಡೆತ್‌ನೋಟ್ ಬರೆದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.ಈ ಘಟನೆ ಬೆಳಗಾವಿ ತಾಲೂಕಿನ ಮಚ್ಛೆಯ ನೆಹರು ನಗರದಲ್ಲಿ ನಡೆದಿದೆ. 28 ವರ್ಷದ ಸಾವಿಯೋ ಪಿಳೈ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾಂಪ್ ಠಾಣೆಯ ಪಿಎಸ್ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಮೈಸೂರಿನ ಹೋಟೆಲ್‌ನಲ್ಲಿ ಪ್ರಿಯಕರನಿಂದಲೇ ಹತ್ಯೆಯಾದ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ!


ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವಳ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದ ಎಂದು ಗಾಳಿ ಸುದ್ದಿ ಕೂಡ ಹಬ್ಬಿದೆ. ಇಬ್ಬರ ಮಧ್ಯೆ ಮನಸ್ತಾಪವಾಗಿ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತಂತೆ. ಈ ವೇಳೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಕ್ಯಾಂಪ್ ಪಿಎಸ್‌ಐ ಸೇರಿ 1.50 ಲಕ್ಷ ಹಣ ಪಡೆದ ಆರೋಪ ಮಾಡಲಾಗಿದೆ. ಪೃಥ್ವಿ ಸಿಂಗ್ ಇವರು ರಮೇಶ ಜಾರಕಿಹೊಳಿ ಆಪ್ತ ಎನ್ನಲಾಗುತ್ತಿದ್ದು, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. 


ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಕ್ಯಾಂಪ್ ಪಿಎಸ್‌ಐ ಸೇರಿ ಇನ್ನು ಹೆಚ್ಚಿನ ಹಣ ನೀಡುವಂತೆ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸರ ಹೆಸರಲ್ಲಿ ಹಾಗೂ ರಮೇಶ್ ಜಾರಕಿಹೊಳಿ ಆಪ್ತರ ವಿರುದ್ಧ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಸಾವಿಯೋ ಪಿಳೈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 


ಇದನ್ನೂ ಓದಿ : CET RANK ಪಟ್ಟಿ ರದ್ದು, ಸರ್ಕಾರದ ನಿರ್ಧಾರ ತಿರಸ್ಕೃತ : ಹೈಕೋರ್ಟ್ ಮಹತ್ವದ ಆದೇಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ