ಚಿಕ್ಕಬಳ್ಳಾಪುರ: ಪತ್ನಿಯ ಜೊತೆ ಅಕ್ರಮ‌ ಸಂಬಂಧ ಹೊಂದಿದ್ದ ಶಂಕೆಯ ಮೇಲೆ ಸ್ವಂತ ಸ್ನೇಹಿತನ ಕತ್ತು ಸೀಳಿ, ರಕ್ತ ಕುಡಿದ ಭಯಾನಕ ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ಘಟನೆ ನಡೆದಿದ್ದು ತಾಲೂಕಿನ ಬಟ್ಲಹಳ್ಳಿ ನಿವಾಸಿ ವಿಜಯ್ ಕೊಲೆ ಮಾಡಿರುವ ಆರೋಪಿಯಾಗಿದ್ದಾರೆ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು.  


ಇದನ್ನೂ ಓದಿ: 16 ವರ್ಷ ವಯಸ್ಸಿನ ಹುಡುಗಿ ಒಪ್ಪಿಗೆಯ ಸಂಭೋಗವನ್ನು ನಿರ್ಧರಿಸಬಹುದು ಎಂದ ಮೇಘಾಲಯ ಹೈಕೋರ್ಟ್..! 


ಪೊಲೀಸರ ಪ್ರಕಾರ, ಆರೋಪಿ ವಿಜಯ್, ತನ್ನ ಸ್ನೇಹಿತ ಮಾರೇಶ್ ತನ್ನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿದ್ದಾನೆ. ಜೂನ್ 19 ರಂದು ವಿಜಯ್ ಮಾರೇಶ್ ಅವರನ್ನು ಭೇಟಿಯಾಗು ಮಾತನಾಡಬೇಕು ಎಂದಿದ್ದಾರೆ. ಮಾರೇಶ್‌ನನ್ನು ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಇದೇ ವಿಚಾರವಾಗಿ ಇಬ್ಬರು ಮಾತನಾಡಿದ್ದಾರೆ. 


ಈ ವೇಳೆ ಮಾತಿಗೆ ಮಾತು ಬೆಳೆದು, ವಿಜಯ್ ಕೋಪದ ಭರದಲ್ಲಿ ಹರಿತವಾದ ಆಯುಧದಿಂದ ಮಾರೇಶ್‌ನ ಕತ್ತು ಸೀಳಿ ಆತನ ರಕ್ತ ಕುಡಿಯಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ದಾರಿಹೋಕರೊಬ್ಬರು ಈ ದೃಶ್ಯವನ್ನು ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ವಿಜಯ್ ಅವರನ್ನು ಬಂಧಿಸಲಾಗಿದೆ. 


ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿಜಯ್ ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿಜಯ್ ವಿರುದ್ಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಮಾರೇಶ್ ನನ್ನು ಆಸ್ಪತ್ರೆಗೆ ದಾಕಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.


ಇದನ್ನೂ ಓದಿ: Shocking News: 11 ತಿಂಗಳ ಕಂದಮ್ಮನ ರೇಪ್ ಮಾಡಿದ 12 ವರ್ಷದ ಅಪ್ರಾಪ್ತ ಬಾಲಕ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.