ಗೌರಿಬಿದನೂರು : ಕೌಟುಂಬಿಕ ಕಲಹದ ಹಿನ್ನೆಲೆ ಹೆಂಡತಿಯ ಕತ್ತನ್ನು ಸೀಳಿ ಪತಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ನೆಹರೂಜಿ ಕಾಲೋನಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

35 ವರ್ಷದ ಮಂಜುನಾಥ್‌ ಹೆಂಡತಿಯ ಕತ್ತನ್ನು ಸೀಳಿದ ಗಂಡ, ಪತ್ನಿಯ ಹೆಸರು ಸ್ವಪ್ನ (25) ಎಂದು ತಿಳಿದು ಬಂದಿದೆ. ಸ್ವಪ್ನ ಮೂಲತಃ ಗೌರಿಬಿದನೂರು ತಾಲೂಕಿನ ವೇದಲ ವೇಣಿ ಗ್ರಾಮದವರಾಗಿದ್ದು, ಮಂಜುನಾಥ್ ಸಬ್ಬನಹಳ್ಳಿ ಗ್ರಾಮದ ನಿವಾಸಿ. ಇಬ್ಬರಿಗೂ ವಿವಾಹವಾಗಿತ್ತು. ಸ್ವಪ್ನ ದೊಡ್ಡಬಳ್ಳಾಪುರದಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮಂಜುನಾಥ್ ಗಾರೆ ಕೆಲಸ ಮಾಡಿಕೊಂಡು ಇಬ್ಬರೂ ಸಹ ಜೀವನ ಸಾಗಿಸುತ್ತಿದ್ದರು.


ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ ಹಿನ್ನಲೆ - ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ


ಅಕ್ರಮ ಸಂಬಂಧದ ಅನುಮಾನದಿಂದ ಮಂಜುನಾಥ್ ಇಂದು ಬೆಳಗ್ಗೆ ಸ್ವಪ್ನ ಜೊತೆ ಜಗಳ ತೆಗೆದು ಹಲ್ಲೆ ಮಾಡಿ ಕತ್ತಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ತಾನೂ ಅದೇ ಚಾಕುವಿನಿಂದ ಕತ್ತನ್ನು ಇರಿದುಕೊಂಡಿದ್ದ. ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.


ಸಧ್ಯ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ತಿಳಿದು ಗೌರಿಬಿದನೂರಿನ ನಗರ ಠಾಣೆಯ ಅಪರಾಧ ವಲಯದ ಪಿಎಸ್‌ಐ ಚಂದ್ರಕಲಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.